Categories: ಕೋಲಾರ

ದೆಹಲಿಯಲ್ಲಿ ಬಿಜೆಪಿ ಗದ್ದುಗೆ: ಕೋಲಾರದಲ್ಲಿ ವಿಜಯೋತ್ಸವ

ಕೋಲಾರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಕೂಡ ಆರು ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನವನ್ನು ಗೆಲ್ಲುವಲ್ಲಿ ಶ್ರಮ ವಹಿಸಲಾಗುತ್ತದೆ, ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತಂದರೆ ಬಗೆಹರಿಸಲಾಗುವುದು. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಕಾರ್ಯಕರ್ತನ ಸ್ಥಾನ ಶಾಶ್ವತವಾಗಿರುತ್ತದೆ ನಾನು ಜಿಲ್ಲಾಧ್ಯಕ್ಷನಾದರೂ ನಾನು ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ದೇಶದಲ್ಲಿ 18 ಕೋಟಿ ಸದಸ್ಯತ್ವ ಪಡೆದು ಹೆಚ್ಚು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಏಕೈಕ ಪಕ್ಷ‌ ಬಿಜೆಪಿಯಾಗಿದ್ದು ಸಕ್ರಿಯವಾಗಿ ನಾವೆಲ್ಲ ಒಗ್ಗಟ್ಟಾಗಿ ದುಡಿಯೋಣ ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಎಸ್.ಬಿ ಮುನಿವೆಂಕಟಪ್ಪ, ಬಿ.ವಿ ಮಹೇಶ್, ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಹೊಸರಾಯಪ್ಪ, ನಗರ ಘಟಕದ ಅಧ್ಯಕ್ಷ ಸಾ.ಮಾ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಆರ್.ಎನ್ ಹನುಮಂತಪ್ಪ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಅರುಣಮ್ಮ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಮಮತಮ್ಮ ಹಿರಿಯ ಮುಖಂಡರಾದ ಜಗದೀಶ್ವಾಚಾರಿ, ಸುರೇಶ್, ಗಾಂಧಿನಗರ ವೆಂಕಟೇಶ್, ಅಲ್ಪಸಂಖ್ಯಾತರ ಘಟಕದ ಅಕ್ಮಲ್ ಪಾಷ, ರಾಜೇಶ್, ನಟರಾಜ್, ನಾಗೇಂದ್ರ, ಹಾರೋಹಳ್ಳಿ ನಾರಾಯಣಸ್ವಾಮಿ ಪದ್ಮಮ್ಮ ರಾಮಚಂದ್ರ ಮುಂತಾದವರು ಇದ್ದು, ವಿಜಯೋತ್ಸವದ ನಂತರ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

4 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago