ದೆಹಲಿಯಲ್ಲಿ ಬಿಜೆಪಿ ಜಯಭೇರಿ: ದೊಡ್ಡಬಳ್ಳಾಪುರದಲ್ಲಿ ವಿಜಯೋತ್ಸವ

ದೊಡ್ಡಬಳ್ಳಾಪುರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಹಳೇಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.

ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ. ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ. ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದು ಮುಖಂಡರು ತಿಳಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಹಿರಿಯ ಮುಖಂಡ ಕೆ.ಟಿ ವೆಂಕಟಚಲಪ್ಪ,  ಗೋಪಿ, ವತ್ಸಲಾ,, ರಾಮಕಿಟ್ಟಿ, ನಗರಸಭಾ ಸದಸ್ಯರಾದ  ಭಾಸ್ಕರ್, ಪದ್ಮನಾಭ, ದೊಡ್ಡಬಳ್ಳಾಪುರ ತಾಲೂಕು ಮತ್ತು ನಗರ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚದ  ಪದಾಧಿಕಾರಿಗಳು, ಓಬಿಸಿ ಮೋರ್ಚಾ ಸದಸ್ಯರು, ಡಾಕ್ಟರ್ ನಾರಾಯಣ್, ಆರೂಡಿ ರಮೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *