ದೊಡ್ಡಬಳ್ಳಾಪುರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಹಳೇಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.
ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ. ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ. ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದು ಮುಖಂಡರು ತಿಳಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಹಿರಿಯ ಮುಖಂಡ ಕೆ.ಟಿ ವೆಂಕಟಚಲಪ್ಪ, ಗೋಪಿ, ವತ್ಸಲಾ,, ರಾಮಕಿಟ್ಟಿ, ನಗರಸಭಾ ಸದಸ್ಯರಾದ ಭಾಸ್ಕರ್, ಪದ್ಮನಾಭ, ದೊಡ್ಡಬಳ್ಳಾಪುರ ತಾಲೂಕು ಮತ್ತು ನಗರ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚದ ಪದಾಧಿಕಾರಿಗಳು, ಓಬಿಸಿ ಮೋರ್ಚಾ ಸದಸ್ಯರು, ಡಾಕ್ಟರ್ ನಾರಾಯಣ್, ಆರೂಡಿ ರಮೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…
ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…