ದೊಡ್ಡಬಳ್ಳಾಪುರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಹಳೇಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.
ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ. ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ. ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದು ಮುಖಂಡರು ತಿಳಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಹಿರಿಯ ಮುಖಂಡ ಕೆ.ಟಿ ವೆಂಕಟಚಲಪ್ಪ, ಗೋಪಿ, ವತ್ಸಲಾ,, ರಾಮಕಿಟ್ಟಿ, ನಗರಸಭಾ ಸದಸ್ಯರಾದ ಭಾಸ್ಕರ್, ಪದ್ಮನಾಭ, ದೊಡ್ಡಬಳ್ಳಾಪುರ ತಾಲೂಕು ಮತ್ತು ನಗರ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚದ ಪದಾಧಿಕಾರಿಗಳು, ಓಬಿಸಿ ಮೋರ್ಚಾ ಸದಸ್ಯರು, ಡಾಕ್ಟರ್ ನಾರಾಯಣ್, ಆರೂಡಿ ರಮೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…