ದೆಹಲಿ ಪ್ರವಾಸಕ್ಕೆ ಸಿಎಂ ಜೊತೆ ನಲಪಾಡ್; ತಂದೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ: ಬಿಟ್‌ಕಾಯಿನ್ ಪ್ರಕರಣದ ಕುರಿತು ಸ್ಪಷ್ಟನೆ

ದೇವನಹಳ್ಳಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ದೆಹಲಿ ಪ್ರವಾಸಕ್ಕೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್, ತಮ್ಮ ತಂದೆ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.

ಇಷ್ಟು ದಿನ ಸಿಎಂ ಆಗುವ ಪ್ರಯತ್ನದಲ್ಲಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಹೋಗುತ್ತಿದ್ದೆವು. ಈಗ ಅವರು ಮುಖ್ಯಮಂತ್ರಿಗಳಾಗಿ ಮೊದಲ ಬಾರಿಗೆ ದೆಹಲಿಗೆ ಹೋಗುತ್ತಿದ್ದಾರೆ. ಉಪಮುಖ್ಯಮಂತ್ರಿಯಾಗಿದ್ದಾಗಲೂ ಜೊತೆಯಲ್ಲಿ ಹೋಗಿದ್ದೆವು. ಮುಖ್ಯಮಂತ್ರಿಗಳ ಜೊತೆಗೆ ಒಂದು ಬಾರಿ ಹೋಗಬೇಕು ಎಂಬ ಕಾರಣಕ್ಕೆ ಈ ಪ್ರವಾಸದಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ಹೇಳಿದರು.

ತಮ್ಮ ತಂದೆ ಎನ್.ಎ. ಹ್ಯಾರಿಸ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಕಾಂಗ್ರೆಸ್ ಸರ್ಕಾರದ ಮೇಲೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನನ್ನ ತಂದೆ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉತ್ತಮ ಕೆಲಸ ಮಾಡಿದ್ದಾರೆ. ಬಿಡಿಎ ಅಧ್ಯಕ್ಷರಾಗಿದ್ದಾಗಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಒಂದು ಅವಕಾಶ ನೀಡಿದರೆ ಪಕ್ಷಕ್ಕೂ ಒಳ್ಳೆಯ ಹೆಸರು ತರುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಪಕ್ಷದ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ನಲಪಾಡ್ ಹೇಳಿದರು.

ಬಿಟ್‌ಕಾಯಿನ್ ಪ್ರಕರಣದ ಕುರಿತು ಸ್ಪಷ್ಟನೆ

ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಲಪಾಡ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚಾರ್ಜ್‌ಶೀಟ್ ಕೂಡ ಬಂದಿಲ್ಲ. ನಿಮಗೆ ಈ ಮಾಹಿತಿ ಹೇಗೆ ಗೊತ್ತಾಯಿತು? ನಮ್ಮ ಬೆಳವಣಿಗೆ ಇಷ್ಟಪಡದ ಕೆಲವರು ಸಚಿವ ಸ್ಥಾನ ತಪ್ಪಿಸಲು ನೋಟಿಸ್ ಬಂದಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

57 minutes ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

7 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

13 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

14 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago