ದೆಹಲಿ ಪ್ರವಾಸಕ್ಕೆ ಸಿಎಂ ಜೊತೆ ನಲಪಾಡ್; ತಂದೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ: ಬಿಟ್‌ಕಾಯಿನ್ ಪ್ರಕರಣದ ಕುರಿತು ಸ್ಪಷ್ಟನೆ

ದೇವನಹಳ್ಳಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ದೆಹಲಿ ಪ್ರವಾಸಕ್ಕೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್, ತಮ್ಮ ತಂದೆ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.

ಇಷ್ಟು ದಿನ ಸಿಎಂ ಆಗುವ ಪ್ರಯತ್ನದಲ್ಲಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಹೋಗುತ್ತಿದ್ದೆವು. ಈಗ ಅವರು ಮುಖ್ಯಮಂತ್ರಿಗಳಾಗಿ ಮೊದಲ ಬಾರಿಗೆ ದೆಹಲಿಗೆ ಹೋಗುತ್ತಿದ್ದಾರೆ. ಉಪಮುಖ್ಯಮಂತ್ರಿಯಾಗಿದ್ದಾಗಲೂ ಜೊತೆಯಲ್ಲಿ ಹೋಗಿದ್ದೆವು. ಮುಖ್ಯಮಂತ್ರಿಗಳ ಜೊತೆಗೆ ಒಂದು ಬಾರಿ ಹೋಗಬೇಕು ಎಂಬ ಕಾರಣಕ್ಕೆ ಈ ಪ್ರವಾಸದಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ಹೇಳಿದರು.

ತಮ್ಮ ತಂದೆ ಎನ್.ಎ. ಹ್ಯಾರಿಸ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಕಾಂಗ್ರೆಸ್ ಸರ್ಕಾರದ ಮೇಲೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನನ್ನ ತಂದೆ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉತ್ತಮ ಕೆಲಸ ಮಾಡಿದ್ದಾರೆ. ಬಿಡಿಎ ಅಧ್ಯಕ್ಷರಾಗಿದ್ದಾಗಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಒಂದು ಅವಕಾಶ ನೀಡಿದರೆ ಪಕ್ಷಕ್ಕೂ ಒಳ್ಳೆಯ ಹೆಸರು ತರುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಪಕ್ಷದ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ನಲಪಾಡ್ ಹೇಳಿದರು.

ಬಿಟ್‌ಕಾಯಿನ್ ಪ್ರಕರಣದ ಕುರಿತು ಸ್ಪಷ್ಟನೆ

ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಲಪಾಡ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚಾರ್ಜ್‌ಶೀಟ್ ಕೂಡ ಬಂದಿಲ್ಲ. ನಿಮಗೆ ಈ ಮಾಹಿತಿ ಹೇಗೆ ಗೊತ್ತಾಯಿತು? ನಮ್ಮ ಬೆಳವಣಿಗೆ ಇಷ್ಟಪಡದ ಕೆಲವರು ಸಚಿವ ಸ್ಥಾನ ತಪ್ಪಿಸಲು ನೋಟಿಸ್ ಬಂದಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

41 minutes ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

21 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago