ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಎಎಪಿಗೆ ಭಾರಿ ಆಘಾತ: ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು

ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಉಂಟಾಗಿದೆ. ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಅನುಭವಿಸಿದ್ದಾರೆ.

ಚುನಾವಣಾ ಆಯೋಗದ ಮೂಲಗಳ ಪ್ರಕಾರ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಿಂಗ್ 28448 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಸಿಎಂ 24583 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕೇಜ್ರಿವಾಲ್ ಒಟ್ಟು 3865 ಮತಗಳ ಅಂತರದಲ್ಲಿ ಸೋತಿದ್ದಾರೆ.

ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದು, ಇದು ಪ್ರಮುಖ ರಾಜಕೀಯ ಏರಿಳಿತವನ್ನು ಸೂಚಿಸುತ್ತದೆ.

2013 ರಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

5 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago