ದೇವನಹಳ್ಳಿಯಲ್ಲಿ ಅಕ್ಕ ಬೇಕರಿ, ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ, ಕೆಫೆ ಸ್ಥಾಪನೆ: ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ, ಕೆಫೆ ಸಹಕಾರಿ-ಸಚಿವ ಶರಣ ಪ್ರಕಾಶ ಪಾಟೀಲ್

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2 ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದರು.

ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಧ ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

*ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ*
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

4 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

14 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

19 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

20 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

22 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago