ದೇವನಹಳ್ಳಿಯಲ್ಲಿ ಅಕ್ಕ ಬೇಕರಿ, ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ, ಕೆಫೆ ಸ್ಥಾಪನೆ: ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ, ಕೆಫೆ ಸಹಕಾರಿ-ಸಚಿವ ಶರಣ ಪ್ರಕಾಶ ಪಾಟೀಲ್

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2 ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದರು.

ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಧ ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

*ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ*
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago