ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.
ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.
ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಧ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ ಎಂದರು.
*ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ*
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…