Categories: ಕೋಲಾರ

ದೇವನಹಳ್ಳಿಯಿಂದ ಹೊಸೂರು ವರಗೆ 3190 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಅನುಮೋದನೆ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ:ದೇವನಹಳ್ಳಿಯಿಂದ ಹೊಸೂರು ಗಡಿಯವರೆಗೆ 110 ಕಿ.ಮೀ ಹೆದ್ದಾರಿ ನಿರ್ಮಿಸಲು ಸಚಿವ ಸಂಪುಟ ಸಭೆ ಒ‌ಪ್ಪಿಗೆ ನೀಡಿದೆ. ಯೋಜನೆಗೆ 3,190 ಕೋಟಿ ಅನುದಾನ ಮೀಸಲಿಡಲಾಗಿದ್ದು, ರಸ್ತೆ ಕಾಮಗಾರಿಗೆ 2,032 ಕೋಟಿ ಹಾಗೂ ಭೂಸ್ವಾಧೀನಕ್ಕೆ 1,158 ಕೋಟಿ ಸಿಗಲಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸದ್ಯದಲ್ಲೇ ಟೆಂಡರ್‌ ಮಾಡಿ ಕಾಮಗಾರಿಗೆ ಮುಖಮಂತ್ರಿಯಿಂದ ಚಾಲನೆ ನೀಡಲಾಗುವುದು ದೇವನಹಳ್ಳಿ, ವಿಜಯಪುರ, ಜಂಗಮನಕೋಟೆ ಕ್ರಾಸ್, ಎಚ್‌ ಕ್ರಾಸ್‌, ವೇಮಗಲ್‌, ನರಸಾರಪುರ, ಕೈಗಾರಿಕಾ ಪ್ರದೇಶ, ಮಾಲೂರು, ಹೊಸೂರು ಗಡಿವರೆಗೆ ಈ ಹೆದ್ದಾರಿ ಇರಲಿದೆ. ಆ ಕಡೆ ತಮಿಳುನಾಡಿವರು ಕೂಡ ಅವರ ವ್ಯಾಪ್ತಿಯಲ್ಲಿ ಹೆದ್ದಾರಿ ಪೂರ್ಣಗೊಳಿಸಿದ್ದಾರೆ. ಇದರಿಂದ ಸಂಚಾರ ದಟ್ಟಣೆಗೆ ಮುಕ್ತಿ ಸಿಗಲಿದ್ದು, ಸಂಚಾರ ಸುಗಮವಾಗಲಿದೆ’ ಎಂದು ಹೇಳಿದರು.

‘ಈ ಯೋಜನೆ ಮಾಡಿಸಿಕೊಳ್ಳಲು ನಾನು, ಶಾಸಕರಾದ ಕೆ.ವೈ.ನಂಜೇಗೌಡ, ಎಸ್‌.ಎನ್‌.ನಾರಾಯಣಸ್ವಾಮಿ, ಶರತ್‌ ಬಚ್ಚೇಗೌಡ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌ ಸಾಕಷ್ಟು ಪ್ರಯತ್ನ ಹಾಕಿದ್ದೇವೆ. ಮುಖ್ಯಮಂತ್ರಿ ಭೇಟಿಯಾಗಿ ಸಚಿವ ಸಂಪುಟದಲ್ಲಿ ತರಲು ಈ ವಿಷಯ ತರುವಂತೆ ಮನವಿ ಮಾಡಿದ್ದೆವು. ಅದಕ್ಕೆ ಸ್ಪಂದನೆ ಸಿಕ್ಕಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರು ಹಾಗೂ ಎರಡೂ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದರು.

‘ಎಲ್ಲಾ ಜಿಲ್ಲೆಯಲ್ಲೂ ಒಂದು ವೈದ್ಯಕೀಯ ಕಾಲೇಜು ಇರಬೇಕೆಂದು ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಹಿಂದೆಯೇ ಚರ್ಚೆ ಆಗಿದೆ. ಹಾಗೆಯೇ ಕೋಲಾರಕ್ಕೂ ಒಂದು ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಬಹಳ ಹಿಂದೆಯೇ ಜಿಲ್ಲೆಯಲ್ಲಿ ಆಗಬೇಕಿತ್ತು. ಆದಷ್ಟು ಬೇಗ ಟೆಂಡರ್‌ ಮಾಡಿಸಿ ನಿರ್ಮಾಣ ಮಾಡಿಸಲಾಗುವುದು. ನಗರದ ಹೊರವಲಯದಲ್ಲಿ ಎರಡು ಕಡೆ ಜಾಗ ಗುರುತಿಸಲಾಗಿದೆ’ ಎಂದು ಹೇಳಿದರು.

‘ಕೋಲಾರಕ್ಕೆ ರಿಂಗ್‌ ರಸ್ತೆ ಅವಶ್ಯವಿದೆ. ಈ ಸಂಬಂಧ ಮುಖ್ಯಮಂತ್ರಿ ಭೇಟಿ ಮಾಡಿ ಅನುದಾನ ತರುತ್ತೇನೆ. ಹಿಂದೆ ನಗರಾಭಿವೃದ್ಧಿ ಇಲಾಖೆ ಮೂಲಕ ಕೇಂದ್ರದಿಂದ 100 ಕೋಟಿ ಬಂದಿತ್ತು. ಆದರೆ, ಏಕೋ ವಾಪಸ್‌ ಪಡೆದಿದ್ದಾರೆ’ ಎಂದು ನುಡಿದರು.

‘ನರಸಾಪುರದಲ್ಲಿ ಇಎಸ್‌ಐ ಆಸ್ಪತ್ರೆಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಲಿದ್ದು, ಅದಕ್ಕೆ ಕೇಂದ್ರದಿಂದ 154 ಕೋಟಿ ಅನುದಾನ ಬಿಡುಗಡೆಯಾಗಿದೆ. ಐದು ಎಕರೆ ಜಾಗವನ್ನು ರಾಜ್ಯ ಸರ್ಕಾರದಿಂದ ನೀಡಲಾಗಿದೆ. ಕೈಗಾರಿಕಾ ಪ್ರದೇಶ ಇರುವುದರಿಂದ ಹೆಚ್ಚು ಕಾರ್ಮಿಕರು ಇದ್ದು, ಇಂಥ ಆಸ್ಪತ್ರೆ ಅಗತ್ಯವಿತ್ತು. ಇದಕ್ಕೆ ಮಾಜಿ ಸಂಸದ ಎಸ್‌.ಮುನಿಸ್ವಾಮಿ ಕೂಡ ಕಾಳಜಿ ವಹಿಸಿ ಹೋರಾಟ ನಡೆಸಿದ್ದರು’ ಎಂದರು.

‘ವಾರ್ತಾ ಇಲಾಖೆಯಲ್ಲಿ ವಾಹನ ಇಲ್ಲದಿರುವ ಮಾಹಿತಿ ನನಗೆ ಗೊತ್ತಿಲ್ಲ. ಅವರೂ ನನ್ನನ್ನು ಕೇಳಿಲ್ಲ. ಈ ಸಂಬಂಧ ನಾನೇ ಖುದ್ದಾಗಿ ಮಾತನಾಡಿ ವಾಹನ ಕೊಡಿಸುವ ಕೆಲಸ ಮಾಡುತ್ತೇನೆ. ಹಿಂದೆ‌ ಶಾಸಕರ ಅನುದಾನದಲ್ಲಿ ಪೊಲೀಸ್‌ ಇಲಾಖೆಗೆ ವಾಹನ ನೀಡಲಾಗಿದೆ’ ಎಂದು ಹೇಳಿದರು.

‘ನಗರದಲ್ಲಿ ರಸ್ತೆ ಕಿರಿದಾಗಿದ್ದು, ಭವಿಷ್ಯದ ದೃಷ್ಟಿಯಿಂದ ವಿಸ್ತರಣೆ ಆಗಬೇಕಿದೆ. ಉದಾಹರಣೆಗೆ ಕಾರಂಜಿ ಕಟ್ಟೆ ರಸ್ತೆ ತೀರಾ ಇಕ್ಕಟ್ಟಾಗಿದೆ. ಮುಂದಿನ ದಿನಗಳಲ್ಲಿ ವಿಸ್ತರಣೆ ಕೈಗೆತ್ತಿಕೊಳ್ಳಲಾಗುವುದು’ ಎಂದರು.
‘ಕ್ಷೇತ್ರದಲ್ಲಿ ಈವರೆಗೆ 70 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಆಗಿದೆ. ಆದರೆ, ಕೆಲಸ ಇನ್ನೂ ಆರಂಭವಾಗಿಲ್ಲ’ ಎಂದು ಹೇಳಿದರು.

‘ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ನವರೂ ಬಲಿಷ್ಠರಾಗಿದ್ದಾರೆ. ಹಾಗೆಯೇ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಕೂಡ ಬಲಿಷ್ಠವಾಗಿದೆ. ನಮ್ಮವರು ಗೆಲ್ಲಲಿದ್ದಾರೆ’ ಎಂದು ತಿಳಿಸಿದರು.

Ramesh Babu

Journalist

Recent Posts

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

4 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

7 hours ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

7 hours ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

10 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

13 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

16 hours ago