ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶರಾಗಿದ್ದಾರೆ.
ವೈದ್ಯರ ಸಮಾವೇಶದಲ್ಲಿ ಭಾಗವಹಿಸಲು ಚನ್ನೈಗೆ ತೆರಳಿದ್ದ ಅವರಿಗೆ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಆಗದ ಕಾರಣ ಸಾವನ್ನಪ್ಪಿದ್ದಾರೆ.
ಒಬ್ಬ ಮಗ, ಒಬ್ಬ ಮಗಳು, ಮಡದಿಯನ್ನು ಅಗಲಿದ್ದಾರೆ.
ಬೆಂಗಳೂರು ಜಿಲ್ಲೆಯ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿದ್ದರು. ವೈದ್ಯರು, ಸಿಬ್ಬಂದಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆಕಾಶ್ ಆಸ್ಪತ್ರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಂತ್ರಣ ಸೇವೆಯ ಜಿಲ್ಲಾ ಸಮನ್ವಯಕರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದರು. ಉತ್ತಮ ಆಡಳಿತಗಾರರಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು.
ಇಂದು ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…