ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶರಾಗಿದ್ದಾರೆ.
ವೈದ್ಯರ ಸಮಾವೇಶದಲ್ಲಿ ಭಾಗವಹಿಸಲು ಚನ್ನೈಗೆ ತೆರಳಿದ್ದ ಅವರಿಗೆ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಆಗದ ಕಾರಣ ಸಾವನ್ನಪ್ಪಿದ್ದಾರೆ.
ಒಬ್ಬ ಮಗ, ಒಬ್ಬ ಮಗಳು, ಮಡದಿಯನ್ನು ಅಗಲಿದ್ದಾರೆ.
ಬೆಂಗಳೂರು ಜಿಲ್ಲೆಯ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿದ್ದರು. ವೈದ್ಯರು, ಸಿಬ್ಬಂದಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆಕಾಶ್ ಆಸ್ಪತ್ರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಂತ್ರಣ ಸೇವೆಯ ಜಿಲ್ಲಾ ಸಮನ್ವಯಕರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದರು. ಉತ್ತಮ ಆಡಳಿತಗಾರರಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು.
ಇಂದು ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…
ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…