ದೇವನಹಳ್ಳಿ ತಾ. ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ಇಲ್ಲಿನ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.

ಎರಡೂ ಗುಂಪುಗಳ ಅಹವಾಲುಗಳನ್ನು ಆಲಿಸಿದ ಸಚಿವದ್ವಯರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಸರಕಾರವು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ದೇವನಹಳ್ಳಿ ತಾಲ್ಲೂಕಿನ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆಬಜೇನಹಳ್ಳಿ, ನೆಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ಶೋತ್ರಿಯ ತೆಲ್ಲೂಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಿಗೆ ಸೇರಿದ 1777 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು 2021ರ ಆಗಸ್ಟ್ 30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಸರಕಾರದ ಈ ನಿರ್ಧಾರಕ್ಕೆ ರೈತರ ಒಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮೇಲ್ಕಂಡ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದೆ. ರೈತರ ಮತ್ತೊಂದು ಗುಂಪು, ಜಮೀನನ್ನು ಬಿಟ್ಟುಕೊಡಲು ತಯಾರಿದ್ದು, ಸ್ವಾಧೀನ ಪ್ರಕ್ರಿಯೆ ಮತ್ತು ಹೆಚ್ಚಿನ ಪರಿಹಾರ ಹಂಚಿಕೆ ಎರಡನ್ನೂ ತ್ವರಿತ ಗತಿಯಲ್ಲಿ ಮುಗಿಸುವಂತೆ ಕೇಳಿಕೊಳ್ಳುತ್ತಿದೆ. ಹೀಗೆ ಮಾಡದೆ ಹಾಗೆಯೇ ಬಿಟ್ಟರೆ ತಮ್ಮದು ತ್ರಿಶಂಕು ಸ್ಥಿತಿಯಾಗಲಿದೆ ಎಂದು ಈ ಗುಂಪಿನವರು ಸಭೆಯಲ್ಲಿ ಅಲವತ್ತುಕೊಂಡರು.

ಸಭೆಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿರುವ ಗುಂಪಿನ ರೈತ ಮುಖಂಡರಾದ ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್ ಹಾಗೂ ಪರವಾಗಿರುವ ಗುಂಪಿನ ಮುಖಂಡ ಲಕ್ಷ್ಮೀನಾರಾಯಣ ನೇತೃತ್ವದ ರೈತರು ಭಾಗವಹಿಸಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

3 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

5 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

6 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

15 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago