ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ಇಲ್ಲಿನ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.
ಎರಡೂ ಗುಂಪುಗಳ ಅಹವಾಲುಗಳನ್ನು ಆಲಿಸಿದ ಸಚಿವದ್ವಯರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಸರಕಾರವು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ದೇವನಹಳ್ಳಿ ತಾಲ್ಲೂಕಿನ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆಬಜೇನಹಳ್ಳಿ, ನೆಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ಶೋತ್ರಿಯ ತೆಲ್ಲೂಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಿಗೆ ಸೇರಿದ 1777 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು 2021ರ ಆಗಸ್ಟ್ 30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಆದರೆ ಸರಕಾರದ ಈ ನಿರ್ಧಾರಕ್ಕೆ ರೈತರ ಒಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮೇಲ್ಕಂಡ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದೆ. ರೈತರ ಮತ್ತೊಂದು ಗುಂಪು, ಜಮೀನನ್ನು ಬಿಟ್ಟುಕೊಡಲು ತಯಾರಿದ್ದು, ಸ್ವಾಧೀನ ಪ್ರಕ್ರಿಯೆ ಮತ್ತು ಹೆಚ್ಚಿನ ಪರಿಹಾರ ಹಂಚಿಕೆ ಎರಡನ್ನೂ ತ್ವರಿತ ಗತಿಯಲ್ಲಿ ಮುಗಿಸುವಂತೆ ಕೇಳಿಕೊಳ್ಳುತ್ತಿದೆ. ಹೀಗೆ ಮಾಡದೆ ಹಾಗೆಯೇ ಬಿಟ್ಟರೆ ತಮ್ಮದು ತ್ರಿಶಂಕು ಸ್ಥಿತಿಯಾಗಲಿದೆ ಎಂದು ಈ ಗುಂಪಿನವರು ಸಭೆಯಲ್ಲಿ ಅಲವತ್ತುಕೊಂಡರು.
ಸಭೆಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿರುವ ಗುಂಪಿನ ರೈತ ಮುಖಂಡರಾದ ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್ ಹಾಗೂ ಪರವಾಗಿರುವ ಗುಂಪಿನ ಮುಖಂಡ ಲಕ್ಷ್ಮೀನಾರಾಯಣ ನೇತೃತ್ವದ ರೈತರು ಭಾಗವಹಿಸಿದ್ದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…