ದೇವನಹಳ್ಳಿ ತಾ. ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ಇಲ್ಲಿನ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.

ಎರಡೂ ಗುಂಪುಗಳ ಅಹವಾಲುಗಳನ್ನು ಆಲಿಸಿದ ಸಚಿವದ್ವಯರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಸರಕಾರವು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ದೇವನಹಳ್ಳಿ ತಾಲ್ಲೂಕಿನ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆಬಜೇನಹಳ್ಳಿ, ನೆಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ಶೋತ್ರಿಯ ತೆಲ್ಲೂಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಿಗೆ ಸೇರಿದ 1777 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು 2021ರ ಆಗಸ್ಟ್ 30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಸರಕಾರದ ಈ ನಿರ್ಧಾರಕ್ಕೆ ರೈತರ ಒಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮೇಲ್ಕಂಡ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದೆ. ರೈತರ ಮತ್ತೊಂದು ಗುಂಪು, ಜಮೀನನ್ನು ಬಿಟ್ಟುಕೊಡಲು ತಯಾರಿದ್ದು, ಸ್ವಾಧೀನ ಪ್ರಕ್ರಿಯೆ ಮತ್ತು ಹೆಚ್ಚಿನ ಪರಿಹಾರ ಹಂಚಿಕೆ ಎರಡನ್ನೂ ತ್ವರಿತ ಗತಿಯಲ್ಲಿ ಮುಗಿಸುವಂತೆ ಕೇಳಿಕೊಳ್ಳುತ್ತಿದೆ. ಹೀಗೆ ಮಾಡದೆ ಹಾಗೆಯೇ ಬಿಟ್ಟರೆ ತಮ್ಮದು ತ್ರಿಶಂಕು ಸ್ಥಿತಿಯಾಗಲಿದೆ ಎಂದು ಈ ಗುಂಪಿನವರು ಸಭೆಯಲ್ಲಿ ಅಲವತ್ತುಕೊಂಡರು.

ಸಭೆಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿರುವ ಗುಂಪಿನ ರೈತ ಮುಖಂಡರಾದ ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್ ಹಾಗೂ ಪರವಾಗಿರುವ ಗುಂಪಿನ ಮುಖಂಡ ಲಕ್ಷ್ಮೀನಾರಾಯಣ ನೇತೃತ್ವದ ರೈತರು ಭಾಗವಹಿಸಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

3 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

22 hours ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

23 hours ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

23 hours ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

1 day ago