ಲೋಕಾ ಬಲೆಗೆ ಬಿದ್ದ ದೇವನಹಳ್ಳಿ ಪೊಲೀಸರು. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆ ಲೋಕಾಯುಕ್ತ ಎಸ್ ಪಿ ಕೆ.ವಂಶಿಕೃಷ್ಣ , ಡಿವೈಎಸ್ಪಿ ನಾಗೇಶ್ ಹಸ್ಲರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ನೊಂದ ಯುವತಿ ಕಡೆಯವರ ಬಳಿ ದೇವನಹಳ್ಳಿ ಠಾಣೆ ಪಿಎಸ್ಐ ಜಗದೇವಿ ಹಾಗೂ ಪಿಸಿ ಮಂಜುನಾಥ್ 75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪಿಎಸ್ಐ ಜಗದೇವಿ ಪರ ಪೊಲೀಸ್ ಪೇದೆ ಅಂಬರೀಶ್ ಮುಂಗಡವಾಗಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೋಕ್ಸೋ ಕಾಯ್ದೆ ಪ್ರಕರಣ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು. ಪಿಎಸ್ಐ ಜಗದೇವಿ ಅವರು ಪೊಲೀಸ್ ಪೇದೆ ಅಂಬರೀಷ್ ಕೈಗೆ ಲಂಚ ಕೊಡಲು ಹೇಳಿದ್ದ ಆಡಿಯೋ ವೈರಲ್ ಆಗಿದೆ. ಚಾರ್ಜ್ ಶೀಟ್ ಬಲಿಷ್ಠವಾಗಿ ರೂಪಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಜಗದೇವಿ.
ಮಾತುಕತೆಯಂತೆ ಇಂದು ಹಣ ಪಡೆಯಲು ಜಗದೇವಿ ಬದಲಿಗೆ ಪಿಸಿ ಅಂಬರೀಶ್ ಬಂದಿದ್ದರು. ಅಂಬರೀಶ್ ಬಲೆಗೆ ಬೀಳ್ತಿದ್ದಂತೆ ಪಿಎಸ್ಐ ಜಗದೇವಿ ಮತ್ತು ಪಿಸಿ ಮಂಜುನಾಥ್ ಪರಾರಿಯಾಗಿದ್ದಾರೆ.
ಪಿಸಿ ಅಂಬರೀಶ್ ನನ್ನ ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ಮಾಡಲಾಗುತ್ತಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…