ಲೋಕಾ ಬಲೆಗೆ ಬಿದ್ದ ದೇವನಹಳ್ಳಿ ಪೊಲೀಸರು. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆ ಲೋಕಾಯುಕ್ತ ಎಸ್ ಪಿ ಕೆ.ವಂಶಿಕೃಷ್ಣ , ಡಿವೈಎಸ್ಪಿ ನಾಗೇಶ್ ಹಸ್ಲರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ನೊಂದ ಯುವತಿ ಕಡೆಯವರ ಬಳಿ ದೇವನಹಳ್ಳಿ ಠಾಣೆ ಪಿಎಸ್ಐ ಜಗದೇವಿ ಹಾಗೂ ಪಿಸಿ ಮಂಜುನಾಥ್ 75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪಿಎಸ್ಐ ಜಗದೇವಿ ಪರ ಪೊಲೀಸ್ ಪೇದೆ ಅಂಬರೀಶ್ ಮುಂಗಡವಾಗಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೋಕ್ಸೋ ಕಾಯ್ದೆ ಪ್ರಕರಣ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು. ಪಿಎಸ್ಐ ಜಗದೇವಿ ಅವರು ಪೊಲೀಸ್ ಪೇದೆ ಅಂಬರೀಷ್ ಕೈಗೆ ಲಂಚ ಕೊಡಲು ಹೇಳಿದ್ದ ಆಡಿಯೋ ವೈರಲ್ ಆಗಿದೆ. ಚಾರ್ಜ್ ಶೀಟ್ ಬಲಿಷ್ಠವಾಗಿ ರೂಪಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಜಗದೇವಿ.
ಮಾತುಕತೆಯಂತೆ ಇಂದು ಹಣ ಪಡೆಯಲು ಜಗದೇವಿ ಬದಲಿಗೆ ಪಿಸಿ ಅಂಬರೀಶ್ ಬಂದಿದ್ದರು. ಅಂಬರೀಶ್ ಬಲೆಗೆ ಬೀಳ್ತಿದ್ದಂತೆ ಪಿಎಸ್ಐ ಜಗದೇವಿ ಮತ್ತು ಪಿಸಿ ಮಂಜುನಾಥ್ ಪರಾರಿಯಾಗಿದ್ದಾರೆ.
ಪಿಸಿ ಅಂಬರೀಶ್ ನನ್ನ ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ಮಾಡಲಾಗುತ್ತಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…