ದೇವನಹಳ್ಳಿ ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಸ್ಥಳಕ್ಕೆ ಮಕ್ಕಳ ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ, ಪರಿಶೀಲನೆ

ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು ನಮ್ಮ ಸರ್ಕಾರ ಮತ್ತು ಆಯೋಗವು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡುತ್ತೇವೆ, ಆದರೆ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡದ ಕಾಮಗಾರಿ ಸರಿಯಾಗಿ ಮಾಡಿಲ್ಲ, ಶಾಲೆಯ ಗೋಡೆಗೆ ಮತ್ತು ಸಜ್ಜೆಗೆ ಯಾವುದೇ ರೀತಿಯ ಲಿಂಕ್ ಇಲ್ಲದೆ ಕಟ್ಟಿದ್ದಾರೆ, ಕಂಬಿ ಕಟ್ಟದೆ ಸುಮ್ಮನೆ ಎರಡು ಇಂಚು ಇಟ್ಟಿಗೆ ಸಿಮೆಂಟ್ ಹಾಕಿ ಬಿಟ್ಟಿದ್ದಾರೆ, ಇದು ಹೆಚ್ಚಿನ ದಿನಗಳು ನಿಲ್ಲುವುದಿಲ್ಲ, ಆದರೆ ಇಷ್ಟು ವರ್ಷ ಹೇಗೆ ತಡೆದಿತ್ತು ಎನ್ನುವುದು ಆಶ್ಚರ್ಯ, ಈ ರೀತಿ ಆಗದಂತೆ ಮುಂದೆ ನೋಡಿಕೊಳ್ಳಬೇಕು.

ಶಿಕ್ಷಕರು ಸಹ ನಮಗೆ ತಿಳಿಸಿದ್ದಾರೆ, ಮುಂಜಾಗ್ರತೆ ಕ್ರಮ ವಹಿಸಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ, ನಮಗೆ 2016ರಲ್ಲಿ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿ ಕಾಮಗಾರಿ ಮಾಡುವ ಬಗ್ಗೆ ದೂರು ನೀಡುತ್ತಾರೆ. ಮಕ್ಕಳು ನಮ್ಮ ದೇಶದ ಆಸ್ತಿ, ಅದಕ್ಕಾಗಿ ಗುಣಮಟ್ಟದ ಕಾಮಗಾರಿ ಮಾಡಬೇಕು, ಆದರೆ ಅವರು ಕಟ್ಟಡ ಕಾಮಗಾರಿ ಮಾಡುವ ಇಂಜಿನಿಯರ್ ಗಳು ಬೇಜವಾಬ್ದಾರಿ ಕೆಲಸ ಮಾಡಿದ್ದಾರೆ.

ಶಾಲೆಯಲ್ಲಿ ಮಕ್ಕಳು ಓದುವುದಕ್ಕೆ ಬರುತ್ತಾರೆ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು, ಮೂರು ಮಕ್ಕಳಿಗೆ ಬೇಕಾದ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ. ಇದು ದುಃಖಕರ ಸಂಗತಿ, ಈಗಾಗಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಲ್ಲಾ ಹಳೆ ಮತ್ತು ಹೊಸ ಶಾಲೆಗಳ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರನ್ನು ಒದಗಿಸಲು ಉಮಾ ಮಹಾದೇವನ್ ಅವರು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ನಾವು ಮಕ್ಕಳ ಸುರಕ್ಷತೆಗೆ ಮೊದಲು ಆದ್ಯತೆ ನೀಡುತ್ತೇವೆ. ಹಾಗೇ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟವನ್ನು ನೀಡುವಾಗ ಶುಚಿತ್ವವನ್ನು ಕಾಪಾಡಬೇಕು, ಮಕ್ಕಳಿಗೆ ಕುಡಿಯುವ ನೀರು ಮತ್ತು ಉತ್ತಮ ಗುಣಮಟ್ಟದ ಊಟವನ್ನು ನೀಡಿದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹಾಗೂ ಶಿಕ್ಷಣದಲ್ಲಿ ಉತ್ತಮವಾಗಿ ಕಲಿಯುತ್ತಾರೆ. ಸೇವಾ ಮನೋಭಾವನೆ ಮನಸ್ಥಿತಿಯಿಂದ ಶಾಲಾ ಕಟ್ಟಡ ನಿರ್ಮಿಸಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಭೆ ನಡೆಸಿ ಇನ್ನೂ ಮುಂದೆ ಈ ರೀತಿ ಆಗದಂತೆ ಇಂತವಹರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಶಾಲಾ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

29 minutes ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

2 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

2 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

2 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

5 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

8 hours ago