ದೇವನಹಳ್ಳಿ ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಸ್ಥಳಕ್ಕೆ ಮಕ್ಕಳ ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ, ಪರಿಶೀಲನೆ

ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು ನಮ್ಮ ಸರ್ಕಾರ ಮತ್ತು ಆಯೋಗವು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡುತ್ತೇವೆ, ಆದರೆ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡದ ಕಾಮಗಾರಿ ಸರಿಯಾಗಿ ಮಾಡಿಲ್ಲ, ಶಾಲೆಯ ಗೋಡೆಗೆ ಮತ್ತು ಸಜ್ಜೆಗೆ ಯಾವುದೇ ರೀತಿಯ ಲಿಂಕ್ ಇಲ್ಲದೆ ಕಟ್ಟಿದ್ದಾರೆ, ಕಂಬಿ ಕಟ್ಟದೆ ಸುಮ್ಮನೆ ಎರಡು ಇಂಚು ಇಟ್ಟಿಗೆ ಸಿಮೆಂಟ್ ಹಾಕಿ ಬಿಟ್ಟಿದ್ದಾರೆ, ಇದು ಹೆಚ್ಚಿನ ದಿನಗಳು ನಿಲ್ಲುವುದಿಲ್ಲ, ಆದರೆ ಇಷ್ಟು ವರ್ಷ ಹೇಗೆ ತಡೆದಿತ್ತು ಎನ್ನುವುದು ಆಶ್ಚರ್ಯ, ಈ ರೀತಿ ಆಗದಂತೆ ಮುಂದೆ ನೋಡಿಕೊಳ್ಳಬೇಕು.

ಶಿಕ್ಷಕರು ಸಹ ನಮಗೆ ತಿಳಿಸಿದ್ದಾರೆ, ಮುಂಜಾಗ್ರತೆ ಕ್ರಮ ವಹಿಸಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ, ನಮಗೆ 2016ರಲ್ಲಿ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿ ಕಾಮಗಾರಿ ಮಾಡುವ ಬಗ್ಗೆ ದೂರು ನೀಡುತ್ತಾರೆ. ಮಕ್ಕಳು ನಮ್ಮ ದೇಶದ ಆಸ್ತಿ, ಅದಕ್ಕಾಗಿ ಗುಣಮಟ್ಟದ ಕಾಮಗಾರಿ ಮಾಡಬೇಕು, ಆದರೆ ಅವರು ಕಟ್ಟಡ ಕಾಮಗಾರಿ ಮಾಡುವ ಇಂಜಿನಿಯರ್ ಗಳು ಬೇಜವಾಬ್ದಾರಿ ಕೆಲಸ ಮಾಡಿದ್ದಾರೆ.

ಶಾಲೆಯಲ್ಲಿ ಮಕ್ಕಳು ಓದುವುದಕ್ಕೆ ಬರುತ್ತಾರೆ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು, ಮೂರು ಮಕ್ಕಳಿಗೆ ಬೇಕಾದ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ. ಇದು ದುಃಖಕರ ಸಂಗತಿ, ಈಗಾಗಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಲ್ಲಾ ಹಳೆ ಮತ್ತು ಹೊಸ ಶಾಲೆಗಳ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರನ್ನು ಒದಗಿಸಲು ಉಮಾ ಮಹಾದೇವನ್ ಅವರು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ನಾವು ಮಕ್ಕಳ ಸುರಕ್ಷತೆಗೆ ಮೊದಲು ಆದ್ಯತೆ ನೀಡುತ್ತೇವೆ. ಹಾಗೇ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟವನ್ನು ನೀಡುವಾಗ ಶುಚಿತ್ವವನ್ನು ಕಾಪಾಡಬೇಕು, ಮಕ್ಕಳಿಗೆ ಕುಡಿಯುವ ನೀರು ಮತ್ತು ಉತ್ತಮ ಗುಣಮಟ್ಟದ ಊಟವನ್ನು ನೀಡಿದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹಾಗೂ ಶಿಕ್ಷಣದಲ್ಲಿ ಉತ್ತಮವಾಗಿ ಕಲಿಯುತ್ತಾರೆ. ಸೇವಾ ಮನೋಭಾವನೆ ಮನಸ್ಥಿತಿಯಿಂದ ಶಾಲಾ ಕಟ್ಟಡ ನಿರ್ಮಿಸಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಭೆ ನಡೆಸಿ ಇನ್ನೂ ಮುಂದೆ ಈ ರೀತಿ ಆಗದಂತೆ ಇಂತವಹರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಶಾಲಾ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago