ದೇವನಹಳ್ಳಿ ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಸ್ಥಳಕ್ಕೆ ಮಕ್ಕಳ ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ, ಪರಿಶೀಲನೆ

ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು ನಮ್ಮ ಸರ್ಕಾರ ಮತ್ತು ಆಯೋಗವು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡುತ್ತೇವೆ, ಆದರೆ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡದ ಕಾಮಗಾರಿ ಸರಿಯಾಗಿ ಮಾಡಿಲ್ಲ, ಶಾಲೆಯ ಗೋಡೆಗೆ ಮತ್ತು ಸಜ್ಜೆಗೆ ಯಾವುದೇ ರೀತಿಯ ಲಿಂಕ್ ಇಲ್ಲದೆ ಕಟ್ಟಿದ್ದಾರೆ, ಕಂಬಿ ಕಟ್ಟದೆ ಸುಮ್ಮನೆ ಎರಡು ಇಂಚು ಇಟ್ಟಿಗೆ ಸಿಮೆಂಟ್ ಹಾಕಿ ಬಿಟ್ಟಿದ್ದಾರೆ, ಇದು ಹೆಚ್ಚಿನ ದಿನಗಳು ನಿಲ್ಲುವುದಿಲ್ಲ, ಆದರೆ ಇಷ್ಟು ವರ್ಷ ಹೇಗೆ ತಡೆದಿತ್ತು ಎನ್ನುವುದು ಆಶ್ಚರ್ಯ, ಈ ರೀತಿ ಆಗದಂತೆ ಮುಂದೆ ನೋಡಿಕೊಳ್ಳಬೇಕು.

ಶಿಕ್ಷಕರು ಸಹ ನಮಗೆ ತಿಳಿಸಿದ್ದಾರೆ, ಮುಂಜಾಗ್ರತೆ ಕ್ರಮ ವಹಿಸಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ, ನಮಗೆ 2016ರಲ್ಲಿ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿ ಕಾಮಗಾರಿ ಮಾಡುವ ಬಗ್ಗೆ ದೂರು ನೀಡುತ್ತಾರೆ. ಮಕ್ಕಳು ನಮ್ಮ ದೇಶದ ಆಸ್ತಿ, ಅದಕ್ಕಾಗಿ ಗುಣಮಟ್ಟದ ಕಾಮಗಾರಿ ಮಾಡಬೇಕು, ಆದರೆ ಅವರು ಕಟ್ಟಡ ಕಾಮಗಾರಿ ಮಾಡುವ ಇಂಜಿನಿಯರ್ ಗಳು ಬೇಜವಾಬ್ದಾರಿ ಕೆಲಸ ಮಾಡಿದ್ದಾರೆ.

ಶಾಲೆಯಲ್ಲಿ ಮಕ್ಕಳು ಓದುವುದಕ್ಕೆ ಬರುತ್ತಾರೆ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು, ಮೂರು ಮಕ್ಕಳಿಗೆ ಬೇಕಾದ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ. ಇದು ದುಃಖಕರ ಸಂಗತಿ, ಈಗಾಗಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಲ್ಲಾ ಹಳೆ ಮತ್ತು ಹೊಸ ಶಾಲೆಗಳ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರನ್ನು ಒದಗಿಸಲು ಉಮಾ ಮಹಾದೇವನ್ ಅವರು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ನಾವು ಮಕ್ಕಳ ಸುರಕ್ಷತೆಗೆ ಮೊದಲು ಆದ್ಯತೆ ನೀಡುತ್ತೇವೆ. ಹಾಗೇ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟವನ್ನು ನೀಡುವಾಗ ಶುಚಿತ್ವವನ್ನು ಕಾಪಾಡಬೇಕು, ಮಕ್ಕಳಿಗೆ ಕುಡಿಯುವ ನೀರು ಮತ್ತು ಉತ್ತಮ ಗುಣಮಟ್ಟದ ಊಟವನ್ನು ನೀಡಿದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹಾಗೂ ಶಿಕ್ಷಣದಲ್ಲಿ ಉತ್ತಮವಾಗಿ ಕಲಿಯುತ್ತಾರೆ. ಸೇವಾ ಮನೋಭಾವನೆ ಮನಸ್ಥಿತಿಯಿಂದ ಶಾಲಾ ಕಟ್ಟಡ ನಿರ್ಮಿಸಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಭೆ ನಡೆಸಿ ಇನ್ನೂ ಮುಂದೆ ಈ ರೀತಿ ಆಗದಂತೆ ಇಂತವಹರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಶಾಲಾ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

16 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago