ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗ, ದಲಿತ, ಶೋಷಣೆಗೆ ಒಳಗಾಗಿದ್ದವರ ಪರವಾಗಿ ಧ್ವನಿಯಾಗಿ ಕೆಲಸ ಮಾಡಿದವರು ದಿ.ದೇವರಾಜು ಅರಸು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕಿ ನಿರ್ದೇಶಕಿ ಅನಿತಾ ಲಕ್ಷ್ಮಿ ತಿಳಿಸಿದರು.
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು ಎಂದರು.
ಅವರ ತತ್ವ–ಸಿದ್ಧಾಂತವನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಶ್ರಮಿಸಿದರು. ಅವರು ನೀಡಿದ ಕೊಡುಗೆಗಳು ಮಾದರಿಯಾಗಿವೆ. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು ಎಂದು ಸ್ಮರಿಸಿದರು
ಈ ವೇಳೆ ಗ್ರೇಡ್ -2 ತಹಶಿಲ್ದಾರ್ ಪ್ರಕಾಶ್, ಸಿಬ್ಬಂದಿ ಸುರೇಶ್, ನರಸಿಂಹಮೂರ್ತಿ, ಬಾಬು ಸೇರಿದಂತೆ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…