ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗ, ದಲಿತ, ಶೋಷಣೆಗೆ ಒಳಗಾಗಿದ್ದವರ ಪರವಾಗಿ ಧ್ವನಿಯಾಗಿ ಕೆಲಸ ಮಾಡಿದವರು ದಿ.ದೇವರಾಜು ಅರಸು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕಿ ನಿರ್ದೇಶಕಿ ಅನಿತಾ ಲಕ್ಷ್ಮಿ ತಿಳಿಸಿದರು.
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು ಎಂದರು.
ಅವರ ತತ್ವ–ಸಿದ್ಧಾಂತವನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಶ್ರಮಿಸಿದರು. ಅವರು ನೀಡಿದ ಕೊಡುಗೆಗಳು ಮಾದರಿಯಾಗಿವೆ. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು ಎಂದು ಸ್ಮರಿಸಿದರು
ಈ ವೇಳೆ ಗ್ರೇಡ್ -2 ತಹಶಿಲ್ದಾರ್ ಪ್ರಕಾಶ್, ಸಿಬ್ಬಂದಿ ಸುರೇಶ್, ನರಸಿಂಹಮೂರ್ತಿ, ಬಾಬು ಸೇರಿದಂತೆ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…