ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ- ಅನಿತಾ ಲಕ್ಷ್ಮಿ

ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗ, ದಲಿತ, ಶೋಷಣೆಗೆ ಒಳಗಾಗಿದ್ದವರ ಪರವಾಗಿ ಧ್ವನಿಯಾಗಿ ಕೆಲಸ ಮಾಡಿದವರು ದಿ.ದೇವರಾಜು ಅರಸು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕಿ ನಿರ್ದೇಶಕಿ ಅನಿತಾ ಲಕ್ಷ್ಮಿ ತಿಳಿಸಿದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು ಎಂದರು.

ಅವರ ತತ್ವ–ಸಿದ್ಧಾಂತವನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಶ್ರಮಿಸಿದರು. ಅವರು ನೀಡಿದ ಕೊಡುಗೆಗಳು ಮಾದರಿಯಾಗಿವೆ. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು ಎಂದು ಸ್ಮರಿಸಿದರು

ಈ ವೇಳೆ ಗ್ರೇಡ್ -2 ತಹಶಿಲ್ದಾರ್ ಪ್ರಕಾಶ್, ಸಿಬ್ಬಂದಿ ಸುರೇಶ್, ನರಸಿಂಹಮೂರ್ತಿ, ಬಾಬು ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago