ದೇವರಾಜ್ ಅರಸ್ ಅವರು ಶೋಷಿತ- ಬಡವರ ಜೀವನ ಸುಧಾರಣೆಗೆ ಶ್ರಮಿಸಿದ್ದಾರೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೇವರಾಜ ಅರಸು ಅವರು ಶೋಷಿತ ವರ್ಗದ ಎಲ್ಲಾ ಬಡವರ ಜೀವನ ಸುಧಾರಣೆಗಾಗಿ ಶ್ರಮಿಸಿದವರು, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿ ಇರುವ ಡಿ‌.ದೇವರಾಜು ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜು ಅರಸು ರವರ 108ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸು ಅವರು ಬಡವರ ಧ್ವನಿಯಾಗಿದ್ದರು ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ನಿಂತವರು. ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಶಿಕ್ಷಣ ಮತ್ತು ಸಮಾಜದ ಶೋಷಿತ ವರ್ಗಗಳಿಂದ ಬಂದ ವಿದ್ಯಾರ್ಥಿಗಳಿಗೆ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್‌ಗಳ ಸ್ಥಾಪನೆಗೆ ಒತ್ತು ನೀಡಿದರು. ಭೂಮಿಯನ್ನು ಉಳುವವನೇ ಮಾಲೀಕ ಎಂಬ ಕಾನೂನು ಜಾರಿಗೆ ತಂದು ಶ್ರೀಮಂತ ಮತ್ತು ಬಡವರ ನಡುವಿನ ಅಂತರವನ್ನು ಕಡಿಮೆ ಮಾಡಿದರು. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿದರು.ಕರ್ನಾಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳಲ್ಲಿ ದೇವರಾಜ ಅರಸು ಕೂಡ ಒಬ್ಬರಾಗಿದ್ದರು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ಮಾತನಾಡಿ ದೇವರಾಜ ಅರಸು ಅವರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಆಗಿದ್ದರು, ಸಾಮಾಜಿಕ ಅಸಮತೋಲನೆಯನ್ನು ತೊಡೆದು ಹಾಕಲು ಶ್ರಮಿಸಿದವರು, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಯನ್ನು ಹೋಗಲಾಡಿಸಲು ಒತ್ತು ನೀಡಿದರು. ವಿಶೇಷ ಮೀಸಲಾತಿ, ವಿಶ್ವವಿದ್ಯಾನಿಲಯಗಳ ನಿರ್ಮಾಣ ಸೇರಿದಂತೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ, ಹಲವು ಯೋಜನೆಗಳನ್ನು ಜಾರಿಗೆ ತಂದರು ಹೀಗಾಗಿ ಇವರನ್ನು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಕರೆಯುತ್ತಾರೆ ಎಂದು ಹೇಳಿದರು.

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಕೂಡ ಆಚರಿಸಲಾಗುತ್ತಿದೆ. ಸದ್ಭಾವನಾ ದಿನ ಎಂದು ಈ ದಿನವನ್ನು ಕರೆಯುತ್ತಾರೆ. ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಜಿಲ್ಲಾಧಿಕಾರಿಗಳು ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್, ದೇವನಹಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಸೇರಿದಂತೆ ಜಿಲ್ಲಾಮಟ್ಟದ,ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

10 minutes ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

28 minutes ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

34 minutes ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

2 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

4 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

9 hours ago