Categories: ಕೋಲಾರ

ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ನಗರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಪೌರಕಾರ್ಮಿಕರು ನಿತ್ಯ ನಮ್ಮ ಮನೆ ಕಸ‌ ಸಂಗ್ರಹಿಸುತ್ತಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶ ಶುದ್ಧ ಮಾಡುತ್ತಾರೆ. ಅವರು ಮಾಡುವಷ್ಟು ಶುದ್ಧವಾದ ಕೆಲಸ ಬೇರೆ ಯಾರೂ ಮಾಡಲ್ಲ ಎಂದರು.

ಪೌರಕಾರ್ಮಿಕರು ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ‌ಮಾಡಿಸಿಕೊಳ್ಳಬೇಕು. ನಗರಸಭೆಯಿಂದ ಆರೋಗ್ಯ ‌ಶಿಬಿರ ಹಮ್ಮಿಕೊಳ್ಳಬೇಕು‌ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಪೌರಕಾರ್ಮಿಕರ ಪರ ಇರುತ್ತೇವೆ. ಪೌರಕಾರ್ಮಿಕರನ್ನು ಕಾಯಂ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಕೂಡ ಪೌರಕಾರ್ಮಿಕರ ಯಾವುದೇ ಕೆಲಸ‌ ಮಾಡಿಕೊಡಲು ಬದ್ಧ ಎಂದರು.

ಯಾರೂ ಕಸವನ್ನು ರಸ್ತೆಯಲ್ಲಿ ಎಸೆಯಬಾರದು. ಮನೆಯ ಬಳಿ ಬರುವ ಗಾಡಿಗೆ‌ ನೀಡಬೇಕು. ಎಲ್ಲೆಂದರಲ್ಲಿ ‌ಕಸ‌ ಹಾಕುವವರ ಮೇಲೆ ಕಣ್ಣಿಡಲು ಒಂದು ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನೂರು ಜನ ನೂರು ರೀತಿ ಮಾತನಾಡುತ್ತಾರೆ. ಆದರೆ, ನಾನು ಅದಕ್ಕೆಲ್ಲಾ ‌ಕೇರ್ ಮಾಡಲ್ಲ. ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಕುಡಾದಿಂದ‌ ನಗರದಲ್ಲಿ ಎರಡು ಸರ್ಕಲ್ ಅಭಿವೃದ್ಧಿ ಮಾಡಲಾಗುವುದು. ಶ್ರೀನಿವಾಸಪುರದ ರಸ್ತೆಯ ಬಂಬೂ ಬಜಾರ್ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. ಎಪಿಎಂಸಿ ಬಳಿ ಮಾಲೂರು ರಸ್ತೆಯಲ್ಲಿ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. 4 ಕೋಟಿ ವೆಚ್ಚದಲ್ಲಿ ಕೋಡಿಕಣ್ಣೂರು ‌ಕೆರೆ‌ ಅಭಿವೃದ್ಧಿ ಮಾಡಲಾಗುವುದು.‌ ಕೋಲಾರಮ್ಮ ದೇಗುಲ ‌ಬಳಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಪಾದಚಾರಿ ಮಾರ್ಗ ಅಭಿವೃದ್ಧಿ ಮಾಡಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ, ಇಂದು ಪೌರಕಾರ್ಮಿಕರ ಹಬ್ಬ, ಅವರನ್ನು ಗೌರವವಾಗಿ ಕಾಣಬೇಕು. ವರ್ಷವಿಡೀ ಕೆಲಸ‌ ಮಾಡುವ ಅವರಿಗೆ‌ ಸಿಗುವುದೇ ಒಂದು ದಿನ. ನಾವೆಲ್ಲಾ ಹಬ್ಬ‌ ಮಾಡುವಾಗ ಅವರು ಕಸ ಎತ್ತುವುದರಲ್ಲಿ ನಿರತರಾಗಿರುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪೌರಕಾರ್ಮಿಕರನ್ನು ಕರೆಯಬೇಕಿತ್ತು. ಇವತ್ತು ಒಂದು ದಿನವಾದರೂ ಅವರಿಗೆ ಯಾವುದೇ ಕೆಲಸ‌ ಕೊಡಬಾರದಿತ್ತು ಎಂದು ಹೇಳಿದರು.

ಕೋಲಾರ ನಗರವನ್ನು ಸಚ್ಛ ನಗರ ಮಾಡಬೇಕು. ಈ ಸಂಬಂಧ ನಗರಸಭೆಯಿಂದ ಪ್ರಸ್ತಾಪ‌ ಇಟ್ಟರೆ ಕೇಂದ್ರ ‌ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯಿಂದ ನಾನು ಅಗತ್ಯ ಸೌಲಭ್ಯ ತಂದು ಕೊಡುತ್ತೇನೆ. ಪೌರಕಾರ್ಮಿಕರ ಏಳಿಗೆಗೆ ಸಾಕಷ್ಟು ಸವಲತ್ತುಗಳು ಇವೆ. ಅವುಗಳನ್ನು ಬಳಸಿಕೊಳ್ಳುವ ಜವಾಬ್ದಾರಿ ತಮ್ಮದು ಎಂದರು.

ಪೌರಕಾರ್ಮಿಕರು ಇಲ್ಲ ಎಂದರೆ ನಗರ ನೈರ್ಮಲ್ಯ ಇರಲ್ಲ. ಅನಾರೋಗ್ಯ ಕಾಡುತ್ತದೆ. ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮದು. ದೇವರಾಜು ಅರಸು ವೈದ್ಯಕೀಯ ಕಾಲೇಜಿನಲ್ಲಿ ವಿಶೇಷ ಚಿಕಿತ್ಸೆ ಬೇಕಿದ್ದರೆ ನಾನು ಮಾತನಾಡಿ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಹೇಳಿದರು.

ನಿವೃತ್ತ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ‌ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ಗೆದ್ದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಆಯುಕ್ತ‌ ನವೀನ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವೈ.ಶಿವಕುಮಾರ್, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ನಗರಸಭೆ ಸದಸ್ಯರಾದ ಪ್ರವೀಣ್ ಗೌಡ, ರಾಕೇಶ್, ಪ್ರಸಾದ್ ಬಾಬು, ಮಂಜುನಾಥ್, ನಗರಸಭೆ ಇನ್ನಿತರ ಸದಸ್ಯರು, ಸಿಬ್ಬಂದಿ,‌‌ ಅಧಿಕಾರಿ ಹಾಗೂ ಪೌರಕಾರ್ಮಿಕರು ಇದ್ದರು.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

2 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

1 day ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

1 day ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago