Categories: ಕೋಲಾರ

ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ನಗರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಪೌರಕಾರ್ಮಿಕರು ನಿತ್ಯ ನಮ್ಮ ಮನೆ ಕಸ‌ ಸಂಗ್ರಹಿಸುತ್ತಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶ ಶುದ್ಧ ಮಾಡುತ್ತಾರೆ. ಅವರು ಮಾಡುವಷ್ಟು ಶುದ್ಧವಾದ ಕೆಲಸ ಬೇರೆ ಯಾರೂ ಮಾಡಲ್ಲ ಎಂದರು.

ಪೌರಕಾರ್ಮಿಕರು ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ‌ಮಾಡಿಸಿಕೊಳ್ಳಬೇಕು. ನಗರಸಭೆಯಿಂದ ಆರೋಗ್ಯ ‌ಶಿಬಿರ ಹಮ್ಮಿಕೊಳ್ಳಬೇಕು‌ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಪೌರಕಾರ್ಮಿಕರ ಪರ ಇರುತ್ತೇವೆ. ಪೌರಕಾರ್ಮಿಕರನ್ನು ಕಾಯಂ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಕೂಡ ಪೌರಕಾರ್ಮಿಕರ ಯಾವುದೇ ಕೆಲಸ‌ ಮಾಡಿಕೊಡಲು ಬದ್ಧ ಎಂದರು.

ಯಾರೂ ಕಸವನ್ನು ರಸ್ತೆಯಲ್ಲಿ ಎಸೆಯಬಾರದು. ಮನೆಯ ಬಳಿ ಬರುವ ಗಾಡಿಗೆ‌ ನೀಡಬೇಕು. ಎಲ್ಲೆಂದರಲ್ಲಿ ‌ಕಸ‌ ಹಾಕುವವರ ಮೇಲೆ ಕಣ್ಣಿಡಲು ಒಂದು ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನೂರು ಜನ ನೂರು ರೀತಿ ಮಾತನಾಡುತ್ತಾರೆ. ಆದರೆ, ನಾನು ಅದಕ್ಕೆಲ್ಲಾ ‌ಕೇರ್ ಮಾಡಲ್ಲ. ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಕುಡಾದಿಂದ‌ ನಗರದಲ್ಲಿ ಎರಡು ಸರ್ಕಲ್ ಅಭಿವೃದ್ಧಿ ಮಾಡಲಾಗುವುದು. ಶ್ರೀನಿವಾಸಪುರದ ರಸ್ತೆಯ ಬಂಬೂ ಬಜಾರ್ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. ಎಪಿಎಂಸಿ ಬಳಿ ಮಾಲೂರು ರಸ್ತೆಯಲ್ಲಿ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. 4 ಕೋಟಿ ವೆಚ್ಚದಲ್ಲಿ ಕೋಡಿಕಣ್ಣೂರು ‌ಕೆರೆ‌ ಅಭಿವೃದ್ಧಿ ಮಾಡಲಾಗುವುದು.‌ ಕೋಲಾರಮ್ಮ ದೇಗುಲ ‌ಬಳಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಪಾದಚಾರಿ ಮಾರ್ಗ ಅಭಿವೃದ್ಧಿ ಮಾಡಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ, ಇಂದು ಪೌರಕಾರ್ಮಿಕರ ಹಬ್ಬ, ಅವರನ್ನು ಗೌರವವಾಗಿ ಕಾಣಬೇಕು. ವರ್ಷವಿಡೀ ಕೆಲಸ‌ ಮಾಡುವ ಅವರಿಗೆ‌ ಸಿಗುವುದೇ ಒಂದು ದಿನ. ನಾವೆಲ್ಲಾ ಹಬ್ಬ‌ ಮಾಡುವಾಗ ಅವರು ಕಸ ಎತ್ತುವುದರಲ್ಲಿ ನಿರತರಾಗಿರುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪೌರಕಾರ್ಮಿಕರನ್ನು ಕರೆಯಬೇಕಿತ್ತು. ಇವತ್ತು ಒಂದು ದಿನವಾದರೂ ಅವರಿಗೆ ಯಾವುದೇ ಕೆಲಸ‌ ಕೊಡಬಾರದಿತ್ತು ಎಂದು ಹೇಳಿದರು.

ಕೋಲಾರ ನಗರವನ್ನು ಸಚ್ಛ ನಗರ ಮಾಡಬೇಕು. ಈ ಸಂಬಂಧ ನಗರಸಭೆಯಿಂದ ಪ್ರಸ್ತಾಪ‌ ಇಟ್ಟರೆ ಕೇಂದ್ರ ‌ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯಿಂದ ನಾನು ಅಗತ್ಯ ಸೌಲಭ್ಯ ತಂದು ಕೊಡುತ್ತೇನೆ. ಪೌರಕಾರ್ಮಿಕರ ಏಳಿಗೆಗೆ ಸಾಕಷ್ಟು ಸವಲತ್ತುಗಳು ಇವೆ. ಅವುಗಳನ್ನು ಬಳಸಿಕೊಳ್ಳುವ ಜವಾಬ್ದಾರಿ ತಮ್ಮದು ಎಂದರು.

ಪೌರಕಾರ್ಮಿಕರು ಇಲ್ಲ ಎಂದರೆ ನಗರ ನೈರ್ಮಲ್ಯ ಇರಲ್ಲ. ಅನಾರೋಗ್ಯ ಕಾಡುತ್ತದೆ. ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮದು. ದೇವರಾಜು ಅರಸು ವೈದ್ಯಕೀಯ ಕಾಲೇಜಿನಲ್ಲಿ ವಿಶೇಷ ಚಿಕಿತ್ಸೆ ಬೇಕಿದ್ದರೆ ನಾನು ಮಾತನಾಡಿ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಹೇಳಿದರು.

ನಿವೃತ್ತ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ‌ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ಗೆದ್ದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಆಯುಕ್ತ‌ ನವೀನ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವೈ.ಶಿವಕುಮಾರ್, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ನಗರಸಭೆ ಸದಸ್ಯರಾದ ಪ್ರವೀಣ್ ಗೌಡ, ರಾಕೇಶ್, ಪ್ರಸಾದ್ ಬಾಬು, ಮಂಜುನಾಥ್, ನಗರಸಭೆ ಇನ್ನಿತರ ಸದಸ್ಯರು, ಸಿಬ್ಬಂದಿ,‌‌ ಅಧಿಕಾರಿ ಹಾಗೂ ಪೌರಕಾರ್ಮಿಕರು ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

14 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago