Categories: ಕೋಲಾರ

ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ನಗರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಪೌರಕಾರ್ಮಿಕರು ನಿತ್ಯ ನಮ್ಮ ಮನೆ ಕಸ‌ ಸಂಗ್ರಹಿಸುತ್ತಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶ ಶುದ್ಧ ಮಾಡುತ್ತಾರೆ. ಅವರು ಮಾಡುವಷ್ಟು ಶುದ್ಧವಾದ ಕೆಲಸ ಬೇರೆ ಯಾರೂ ಮಾಡಲ್ಲ ಎಂದರು.

ಪೌರಕಾರ್ಮಿಕರು ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ‌ಮಾಡಿಸಿಕೊಳ್ಳಬೇಕು. ನಗರಸಭೆಯಿಂದ ಆರೋಗ್ಯ ‌ಶಿಬಿರ ಹಮ್ಮಿಕೊಳ್ಳಬೇಕು‌ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಪೌರಕಾರ್ಮಿಕರ ಪರ ಇರುತ್ತೇವೆ. ಪೌರಕಾರ್ಮಿಕರನ್ನು ಕಾಯಂ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಕೂಡ ಪೌರಕಾರ್ಮಿಕರ ಯಾವುದೇ ಕೆಲಸ‌ ಮಾಡಿಕೊಡಲು ಬದ್ಧ ಎಂದರು.

ಯಾರೂ ಕಸವನ್ನು ರಸ್ತೆಯಲ್ಲಿ ಎಸೆಯಬಾರದು. ಮನೆಯ ಬಳಿ ಬರುವ ಗಾಡಿಗೆ‌ ನೀಡಬೇಕು. ಎಲ್ಲೆಂದರಲ್ಲಿ ‌ಕಸ‌ ಹಾಕುವವರ ಮೇಲೆ ಕಣ್ಣಿಡಲು ಒಂದು ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನೂರು ಜನ ನೂರು ರೀತಿ ಮಾತನಾಡುತ್ತಾರೆ. ಆದರೆ, ನಾನು ಅದಕ್ಕೆಲ್ಲಾ ‌ಕೇರ್ ಮಾಡಲ್ಲ. ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಕುಡಾದಿಂದ‌ ನಗರದಲ್ಲಿ ಎರಡು ಸರ್ಕಲ್ ಅಭಿವೃದ್ಧಿ ಮಾಡಲಾಗುವುದು. ಶ್ರೀನಿವಾಸಪುರದ ರಸ್ತೆಯ ಬಂಬೂ ಬಜಾರ್ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. ಎಪಿಎಂಸಿ ಬಳಿ ಮಾಲೂರು ರಸ್ತೆಯಲ್ಲಿ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. 4 ಕೋಟಿ ವೆಚ್ಚದಲ್ಲಿ ಕೋಡಿಕಣ್ಣೂರು ‌ಕೆರೆ‌ ಅಭಿವೃದ್ಧಿ ಮಾಡಲಾಗುವುದು.‌ ಕೋಲಾರಮ್ಮ ದೇಗುಲ ‌ಬಳಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಪಾದಚಾರಿ ಮಾರ್ಗ ಅಭಿವೃದ್ಧಿ ಮಾಡಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ, ಇಂದು ಪೌರಕಾರ್ಮಿಕರ ಹಬ್ಬ, ಅವರನ್ನು ಗೌರವವಾಗಿ ಕಾಣಬೇಕು. ವರ್ಷವಿಡೀ ಕೆಲಸ‌ ಮಾಡುವ ಅವರಿಗೆ‌ ಸಿಗುವುದೇ ಒಂದು ದಿನ. ನಾವೆಲ್ಲಾ ಹಬ್ಬ‌ ಮಾಡುವಾಗ ಅವರು ಕಸ ಎತ್ತುವುದರಲ್ಲಿ ನಿರತರಾಗಿರುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪೌರಕಾರ್ಮಿಕರನ್ನು ಕರೆಯಬೇಕಿತ್ತು. ಇವತ್ತು ಒಂದು ದಿನವಾದರೂ ಅವರಿಗೆ ಯಾವುದೇ ಕೆಲಸ‌ ಕೊಡಬಾರದಿತ್ತು ಎಂದು ಹೇಳಿದರು.

ಕೋಲಾರ ನಗರವನ್ನು ಸಚ್ಛ ನಗರ ಮಾಡಬೇಕು. ಈ ಸಂಬಂಧ ನಗರಸಭೆಯಿಂದ ಪ್ರಸ್ತಾಪ‌ ಇಟ್ಟರೆ ಕೇಂದ್ರ ‌ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯಿಂದ ನಾನು ಅಗತ್ಯ ಸೌಲಭ್ಯ ತಂದು ಕೊಡುತ್ತೇನೆ. ಪೌರಕಾರ್ಮಿಕರ ಏಳಿಗೆಗೆ ಸಾಕಷ್ಟು ಸವಲತ್ತುಗಳು ಇವೆ. ಅವುಗಳನ್ನು ಬಳಸಿಕೊಳ್ಳುವ ಜವಾಬ್ದಾರಿ ತಮ್ಮದು ಎಂದರು.

ಪೌರಕಾರ್ಮಿಕರು ಇಲ್ಲ ಎಂದರೆ ನಗರ ನೈರ್ಮಲ್ಯ ಇರಲ್ಲ. ಅನಾರೋಗ್ಯ ಕಾಡುತ್ತದೆ. ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮದು. ದೇವರಾಜು ಅರಸು ವೈದ್ಯಕೀಯ ಕಾಲೇಜಿನಲ್ಲಿ ವಿಶೇಷ ಚಿಕಿತ್ಸೆ ಬೇಕಿದ್ದರೆ ನಾನು ಮಾತನಾಡಿ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಹೇಳಿದರು.

ನಿವೃತ್ತ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ‌ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ಗೆದ್ದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಆಯುಕ್ತ‌ ನವೀನ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವೈ.ಶಿವಕುಮಾರ್, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ನಗರಸಭೆ ಸದಸ್ಯರಾದ ಪ್ರವೀಣ್ ಗೌಡ, ರಾಕೇಶ್, ಪ್ರಸಾದ್ ಬಾಬು, ಮಂಜುನಾಥ್, ನಗರಸಭೆ ಇನ್ನಿತರ ಸದಸ್ಯರು, ಸಿಬ್ಬಂದಿ,‌‌ ಅಧಿಕಾರಿ ಹಾಗೂ ಪೌರಕಾರ್ಮಿಕರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

30 minutes ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

13 hours ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

13 hours ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

16 hours ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

16 hours ago

ಕೆಂಪೇಗೌಡರ ಪುತ್ಥಳಿ ಭೂಮಿಪೂಜೆ ಗೊಂದಲ ವಿಚಾರ: ಕಾನೂನುಬದ್ಧವಾಗಿಯೇ ಕಾರ್ಯ ನಡೆದಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ – ಬಾಶೆಟ್ಟಿಹಳ್ಳಿ ಪಪಂ ಅಧ್ಯಕ್ಷ ಪ್ರೇಮ್ ಕುಮಾರ್ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…

17 hours ago