Categories: ಲೇಖನ

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…

ಭೂಮಿಯ ಮೇಲೆ

ನಾವಿರುವುದು ಸುಮಾರು 750 ಕೋಟಿ ನರಮಾನವರು,…….

ವಿಶಾಲವಾದ ಆಕಾಶ,
ಆದರೆ, ಅನೇಕರಿಗಿಲ್ಲ ಸೂರು……..

ವಿಪುಲವಾದ ನೀರು,
ಆದರೆ, ಕುಡಿಯುವ ನೀರಿಗೆ ಹಾಹಾಕಾರ………

ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ,
ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ…….

ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ…….

ಸರ್ವಾಂತರ್ಯಾಮಿ ಗಾಳಿ,
ಆದರೆ, ಶುದ್ಧ ಗಾಳಿಗೂ ಪರದಾಟ……..

ಇದೇ ಅಭಿವೃದ್ಧಿ, ಇದೇ ನಾಗರಿಕತೆ……..,

ಆಕ್ಸ್‌ಫರ್ಡ್‌, ಕೇಂಬ್ರಿಡ್ಜ್‌‌‌‌‌‌‌‌‌‌‌, ಹಾರ್ವರ್ಡ್‌, ಐಐಟಿ, ಐಐಎಮ್, ವಿಶ್ವವಿದ್ಯಾಲಯಗಳು,
ಆದರೂ ಮತಿಗೆಟ್ಟವರಿಗಿಲ್ಲ ಕೊರತೆ……..

ಕ್ಷಣಾರ್ಧದಲ್ಲಿ ಇಡೀ ಮನುಕುಲದ ನಾಶಕ್ಕಿವೆ ಬಾಂಬುಗಳು,
ಆದರೂ, ಮನುಷ್ಯನ ರಕ್ಷಣೆಗಿಲ್ಲ ದಾರಿಗಳು…….

ಮಂಗಳ ಗ್ರಹ ಹತ್ತಿರವಾಗುತ್ತಿದೆ,
ಆದರೆ, ನಮ್ಮ ಬಡ ಹಳ್ಳಿಗಳು ದೂರವಾಗುತ್ತಿವೆ……..

ರಸ್ತೆಗಳು ಸುಂದರವಾಗುತ್ತಿವೆ,
ಆದರೆ, ಅಪಘಾತಗಳು ನಿರಂತರವಾಗುತ್ತಿವೆ……

ಆಸ್ಪತ್ರೆಗಳು ಹ್ಯೆಟೆಕ್ ಗಳು, ಮಲ್ಟಿಸ್ಪೆಷಾಲಿಟಿಗಳು ಆಗುತ್ತಿವೆ.
ಆದರೆ, ಆರೋಗ್ಯ ಹದಗೆಡುತ್ತಿದೆ,
ಸಾವು ಏರುತ್ತಿದೆ…….

ಬೆಳೆಯುತ್ತಿವೆ ಶಿಕ್ಷಣ ಸಂಸ್ಥೆಗಳು,
ಆದರೆ, ಕೊಳೆಯುತ್ತಿವೆ ನಮ್ಮ ಮನಸ್ಸುಗಳು…….

ಎಲ್ಲರನ್ನೂ ಬೆಸೆಯುತ್ತಿವೆ ಸಾಮಾಜಿಕ ಜಾಲತಾಣಗಳು,
ಆದರೆ ಕೊರಗುತ್ತಿವೆ ಮನಸ್ಸುಗಳು ಅನಾಥ ಪ್ರಜ್ಞೆಯಲ್ಲಿ……

ಪ್ರೀತಿಗಾಗಿ ಹಾತೊರೆಯುವ ಮನಸ್ಸುಗಳ ನಡುವೆ ವಿರಹಿಗಳ ಸಂಖ್ಯೆ ಏರುತ್ತಲೇ ಇದೆ…….

ಇದೇ ಅಭಿವೃದ್ಧಿ, ಇದೇ ನಾಗರಿಕತೆ……..

ಮತ್ತೊಮ್ಮೆ ನಮ್ಮನ್ನು ನಾವು ಪುನರ್ರೂಪಿಸಿಕೊಳ್ಳಬೇಕಿದೆ……

ಆ ನಿಟ್ಟಿನಲ್ಲಿ ನಾವೆಲ್ಲ ಯೋಚಿಸೋಣ……

ಏಕೆಂದರೆ ಇದು ನಮ್ಮದೇ ಸಮಾಜ, ನಮ್ಮ ರಕ್ಷಣೆಗಾಗಿ ಬೇರೆ ಯಾರೂ ಇಲ್ಲ, ಆ ದೇವರು ಸಹ……..

ಓಂ, ದೇವರೇ…….

ತಿನ್ನುವ ಅನ್ನ ನಿನ್ನದಂತೆ….

ಕುಡಿಯುವ ನೀರು ನಿನ್ನದಂತೆ….

ಉಸಿರಾಡುವ ಗಾಳಿ ನಿನ್ನದಂತೆ….

ಕಾಣುತ್ತಿರುವ ಬೆಳಕು ನಿನ್ನದಂತೆ…..

ನಿಂತಿರುವ ನೆಲ ನಿನ್ನದಂತೆ…

ತೊಡುವ ಬಟ್ಟೆ ನಿನ್ನದಂತೆ….

ವಾಸಿಸುತ್ತಿರುವ ಮನೆ ನಿನ್ನದಂತೆ…..

ಹುಟ್ಟಿಸಿದ ಅಪ್ಪ ಅಮ್ಮ ನಿನ್ನವರಂತೆ…..

ಅವರನ್ನುಟ್ಟಿಸಿದ ಅಜ್ಜ ಅಜ್ಜಿ ನಿನ್ನವರಂತೆ…..

ನನ್ನ ಹೆಂಡತಿ ಮಕ್ಕಳೂ ನಿನ್ನವರಂತೆ……

ಕೊನೆಗೆ ನಾನೂ ನಿನ್ನವನಂತೆ,…..

ಹಾಗಾದರೆ ನಾನ್ಯಾರು ?….

ನೀನಾಡಿಸುವ ಗೊಂಬೆಯೆ ?…

ಸರಿ ಒಪ್ಪಿಕೊಳ್ಳೋಣ,….

ಇಷ್ಟೆಲ್ಲಾ ಕೊಟ್ಟ ನಿನಗೆ ಕೃತಜ್ಞತೆ ಸಲ್ಲಿಸಬೇಕಿದೆ…..

ಎಲ್ಲಿರುವೆ ನೀನು ಅದನ್ನಾದರೂ ಹೇಳು…..

ನಿನ್ನಲ್ಲೇ ಇರುವೆ, ಅಲ್ಲಿರುವೆ,
ಇಲ್ಲಿರುವೆ, ಎಲ್ಲೆಲ್ಲೂ ಇರುವೆ,
ಈ ಕಥೆ ಎಲ್ಲಾ ಬೇಡ.
ನಿಜ ಹೇಳು ಎಲ್ಲಿರುವೆ ?…..

ಯಾರೋ ಮಹಾತ್ಮರು ಹೇಳಿದರು,….

ಯಾವುದೋ ಗ್ರಂಥ ಹೇಳಿದೆ,…..

ಅದೊಂದು ಅನುಭವ,….

ಸರಿಯಾದ ಮಾರ್ಗದಲ್ಲಿ ಹುಡುಕಿದರೆ ಸಿಗುವನು ಎಂದು ಯಾರೋ
ನನ್ನಂತ ನರಮಾನವರು ಹೇಳುವ ಪುರಾಣ ಬೇಡ……

ನಿಜ ಹೇಳು ಎಲ್ಲಿರುವೆ ?….

ಇಲ್ಲದಿರುವ ನಿನ್ನನ್ನು ಒಪ್ಪಲು ನಾನೇನು ಮೂರ್ಖನೆ,…….

ನನಗೇನು ಗೊತ್ತಿಲ್ಲವೇ, ಸೃಷ್ಟಿಯ ಜೀವರಾಶಿಯಲ್ಲಿ ನಾನೊಂದು ಅಣು,…..

ನಾನು ಬದುಕಿರುವುದೇ ನನಗೆ ಪ್ರಕೃತಿ ನೀಡಿದ ಸಾಮರ್ಥ್ಯದಿಂದ…..

ಯಾವ ಕ್ಷಣದಲ್ಲಾದರು ಅಳಿದು ಹೋಗುವ ಪ್ರಾಣವಿದು,…..

ನನಗಾದರೂ ಜೀವವಿದೆ, ನಿನಗೇನಿದೆ ?…..

ಬರಿಯ ಪೋಟೋ, ಶಿಲೆ, ಮಂತ್ರ, ಯಂತ್ರ, ತಂತ್ರ,…..

ಆದರೂ ಏಕೆ ನೀನು ನನ್ನನ್ನು ಕಾಡುವೆ
ಪ್ರತಿಕ್ಷಣ ಭೂತದಂತೆ,…..

ಮನವೆಂಬ ಮರ್ಕಟಕೆ ಹೆಂಡ ಕುಡಿಸಿ
ಚೇಳು ಕುಟುಕಿಸಿದಂತಾಗಿದೆ ನನ್ನ ಮನಸ್ಸು…..,

ಇದ್ದರೆ ಮರ್ಯಾದೆಯಿಂದ ಬಾ,
ಇಲ್ಲದಿದ್ದರೆ ತೊಲಗಾಚೆ,…..

ತಲೆ ತಿನ್ನಬೇಡ
ಜನರೆಲ್ಲಾ ಗೊಂದಲದಲ್ಲಿದ್ದಾರೆ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

6 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

7 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

7 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

13 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

13 hours ago