Categories: ಲೇಖನ

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…

ಭೂಮಿಯ ಮೇಲೆ

ನಾವಿರುವುದು ಸುಮಾರು 750 ಕೋಟಿ ನರಮಾನವರು,…….

ವಿಶಾಲವಾದ ಆಕಾಶ,
ಆದರೆ, ಅನೇಕರಿಗಿಲ್ಲ ಸೂರು……..

ವಿಪುಲವಾದ ನೀರು,
ಆದರೆ, ಕುಡಿಯುವ ನೀರಿಗೆ ಹಾಹಾಕಾರ………

ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ,
ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ…….

ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ…….

ಸರ್ವಾಂತರ್ಯಾಮಿ ಗಾಳಿ,
ಆದರೆ, ಶುದ್ಧ ಗಾಳಿಗೂ ಪರದಾಟ……..

ಇದೇ ಅಭಿವೃದ್ಧಿ, ಇದೇ ನಾಗರಿಕತೆ……..,

ಆಕ್ಸ್‌ಫರ್ಡ್‌, ಕೇಂಬ್ರಿಡ್ಜ್‌‌‌‌‌‌‌‌‌‌‌, ಹಾರ್ವರ್ಡ್‌, ಐಐಟಿ, ಐಐಎಮ್, ವಿಶ್ವವಿದ್ಯಾಲಯಗಳು,
ಆದರೂ ಮತಿಗೆಟ್ಟವರಿಗಿಲ್ಲ ಕೊರತೆ……..

ಕ್ಷಣಾರ್ಧದಲ್ಲಿ ಇಡೀ ಮನುಕುಲದ ನಾಶಕ್ಕಿವೆ ಬಾಂಬುಗಳು,
ಆದರೂ, ಮನುಷ್ಯನ ರಕ್ಷಣೆಗಿಲ್ಲ ದಾರಿಗಳು…….

ಮಂಗಳ ಗ್ರಹ ಹತ್ತಿರವಾಗುತ್ತಿದೆ,
ಆದರೆ, ನಮ್ಮ ಬಡ ಹಳ್ಳಿಗಳು ದೂರವಾಗುತ್ತಿವೆ……..

ರಸ್ತೆಗಳು ಸುಂದರವಾಗುತ್ತಿವೆ,
ಆದರೆ, ಅಪಘಾತಗಳು ನಿರಂತರವಾಗುತ್ತಿವೆ……

ಆಸ್ಪತ್ರೆಗಳು ಹ್ಯೆಟೆಕ್ ಗಳು, ಮಲ್ಟಿಸ್ಪೆಷಾಲಿಟಿಗಳು ಆಗುತ್ತಿವೆ.
ಆದರೆ, ಆರೋಗ್ಯ ಹದಗೆಡುತ್ತಿದೆ,
ಸಾವು ಏರುತ್ತಿದೆ…….

ಬೆಳೆಯುತ್ತಿವೆ ಶಿಕ್ಷಣ ಸಂಸ್ಥೆಗಳು,
ಆದರೆ, ಕೊಳೆಯುತ್ತಿವೆ ನಮ್ಮ ಮನಸ್ಸುಗಳು…….

ಎಲ್ಲರನ್ನೂ ಬೆಸೆಯುತ್ತಿವೆ ಸಾಮಾಜಿಕ ಜಾಲತಾಣಗಳು,
ಆದರೆ ಕೊರಗುತ್ತಿವೆ ಮನಸ್ಸುಗಳು ಅನಾಥ ಪ್ರಜ್ಞೆಯಲ್ಲಿ……

ಪ್ರೀತಿಗಾಗಿ ಹಾತೊರೆಯುವ ಮನಸ್ಸುಗಳ ನಡುವೆ ವಿರಹಿಗಳ ಸಂಖ್ಯೆ ಏರುತ್ತಲೇ ಇದೆ…….

ಇದೇ ಅಭಿವೃದ್ಧಿ, ಇದೇ ನಾಗರಿಕತೆ……..

ಮತ್ತೊಮ್ಮೆ ನಮ್ಮನ್ನು ನಾವು ಪುನರ್ರೂಪಿಸಿಕೊಳ್ಳಬೇಕಿದೆ……

ಆ ನಿಟ್ಟಿನಲ್ಲಿ ನಾವೆಲ್ಲ ಯೋಚಿಸೋಣ……

ಏಕೆಂದರೆ ಇದು ನಮ್ಮದೇ ಸಮಾಜ, ನಮ್ಮ ರಕ್ಷಣೆಗಾಗಿ ಬೇರೆ ಯಾರೂ ಇಲ್ಲ, ಆ ದೇವರು ಸಹ……..

ಓಂ, ದೇವರೇ…….

ತಿನ್ನುವ ಅನ್ನ ನಿನ್ನದಂತೆ….

ಕುಡಿಯುವ ನೀರು ನಿನ್ನದಂತೆ….

ಉಸಿರಾಡುವ ಗಾಳಿ ನಿನ್ನದಂತೆ….

ಕಾಣುತ್ತಿರುವ ಬೆಳಕು ನಿನ್ನದಂತೆ…..

ನಿಂತಿರುವ ನೆಲ ನಿನ್ನದಂತೆ…

ತೊಡುವ ಬಟ್ಟೆ ನಿನ್ನದಂತೆ….

ವಾಸಿಸುತ್ತಿರುವ ಮನೆ ನಿನ್ನದಂತೆ…..

ಹುಟ್ಟಿಸಿದ ಅಪ್ಪ ಅಮ್ಮ ನಿನ್ನವರಂತೆ…..

ಅವರನ್ನುಟ್ಟಿಸಿದ ಅಜ್ಜ ಅಜ್ಜಿ ನಿನ್ನವರಂತೆ…..

ನನ್ನ ಹೆಂಡತಿ ಮಕ್ಕಳೂ ನಿನ್ನವರಂತೆ……

ಕೊನೆಗೆ ನಾನೂ ನಿನ್ನವನಂತೆ,…..

ಹಾಗಾದರೆ ನಾನ್ಯಾರು ?….

ನೀನಾಡಿಸುವ ಗೊಂಬೆಯೆ ?…

ಸರಿ ಒಪ್ಪಿಕೊಳ್ಳೋಣ,….

ಇಷ್ಟೆಲ್ಲಾ ಕೊಟ್ಟ ನಿನಗೆ ಕೃತಜ್ಞತೆ ಸಲ್ಲಿಸಬೇಕಿದೆ…..

ಎಲ್ಲಿರುವೆ ನೀನು ಅದನ್ನಾದರೂ ಹೇಳು…..

ನಿನ್ನಲ್ಲೇ ಇರುವೆ, ಅಲ್ಲಿರುವೆ,
ಇಲ್ಲಿರುವೆ, ಎಲ್ಲೆಲ್ಲೂ ಇರುವೆ,
ಈ ಕಥೆ ಎಲ್ಲಾ ಬೇಡ.
ನಿಜ ಹೇಳು ಎಲ್ಲಿರುವೆ ?…..

ಯಾರೋ ಮಹಾತ್ಮರು ಹೇಳಿದರು,….

ಯಾವುದೋ ಗ್ರಂಥ ಹೇಳಿದೆ,…..

ಅದೊಂದು ಅನುಭವ,….

ಸರಿಯಾದ ಮಾರ್ಗದಲ್ಲಿ ಹುಡುಕಿದರೆ ಸಿಗುವನು ಎಂದು ಯಾರೋ
ನನ್ನಂತ ನರಮಾನವರು ಹೇಳುವ ಪುರಾಣ ಬೇಡ……

ನಿಜ ಹೇಳು ಎಲ್ಲಿರುವೆ ?….

ಇಲ್ಲದಿರುವ ನಿನ್ನನ್ನು ಒಪ್ಪಲು ನಾನೇನು ಮೂರ್ಖನೆ,…….

ನನಗೇನು ಗೊತ್ತಿಲ್ಲವೇ, ಸೃಷ್ಟಿಯ ಜೀವರಾಶಿಯಲ್ಲಿ ನಾನೊಂದು ಅಣು,…..

ನಾನು ಬದುಕಿರುವುದೇ ನನಗೆ ಪ್ರಕೃತಿ ನೀಡಿದ ಸಾಮರ್ಥ್ಯದಿಂದ…..

ಯಾವ ಕ್ಷಣದಲ್ಲಾದರು ಅಳಿದು ಹೋಗುವ ಪ್ರಾಣವಿದು,…..

ನನಗಾದರೂ ಜೀವವಿದೆ, ನಿನಗೇನಿದೆ ?…..

ಬರಿಯ ಪೋಟೋ, ಶಿಲೆ, ಮಂತ್ರ, ಯಂತ್ರ, ತಂತ್ರ,…..

ಆದರೂ ಏಕೆ ನೀನು ನನ್ನನ್ನು ಕಾಡುವೆ
ಪ್ರತಿಕ್ಷಣ ಭೂತದಂತೆ,…..

ಮನವೆಂಬ ಮರ್ಕಟಕೆ ಹೆಂಡ ಕುಡಿಸಿ
ಚೇಳು ಕುಟುಕಿಸಿದಂತಾಗಿದೆ ನನ್ನ ಮನಸ್ಸು…..,

ಇದ್ದರೆ ಮರ್ಯಾದೆಯಿಂದ ಬಾ,
ಇಲ್ಲದಿದ್ದರೆ ತೊಲಗಾಚೆ,…..

ತಲೆ ತಿನ್ನಬೇಡ
ಜನರೆಲ್ಲಾ ಗೊಂದಲದಲ್ಲಿದ್ದಾರೆ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago