Categories: ಲೇಖನ

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…

ಭೂಮಿಯ ಮೇಲೆ

ನಾವಿರುವುದು ಸುಮಾರು 750 ಕೋಟಿ ನರಮಾನವರು,…….

ವಿಶಾಲವಾದ ಆಕಾಶ,
ಆದರೆ, ಅನೇಕರಿಗಿಲ್ಲ ಸೂರು……..

ವಿಪುಲವಾದ ನೀರು,
ಆದರೆ, ಕುಡಿಯುವ ನೀರಿಗೆ ಹಾಹಾಕಾರ………

ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ,
ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ…….

ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ…….

ಸರ್ವಾಂತರ್ಯಾಮಿ ಗಾಳಿ,
ಆದರೆ, ಶುದ್ಧ ಗಾಳಿಗೂ ಪರದಾಟ……..

ಇದೇ ಅಭಿವೃದ್ಧಿ, ಇದೇ ನಾಗರಿಕತೆ……..,

ಆಕ್ಸ್‌ಫರ್ಡ್‌, ಕೇಂಬ್ರಿಡ್ಜ್‌‌‌‌‌‌‌‌‌‌‌, ಹಾರ್ವರ್ಡ್‌, ಐಐಟಿ, ಐಐಎಮ್, ವಿಶ್ವವಿದ್ಯಾಲಯಗಳು,
ಆದರೂ ಮತಿಗೆಟ್ಟವರಿಗಿಲ್ಲ ಕೊರತೆ……..

ಕ್ಷಣಾರ್ಧದಲ್ಲಿ ಇಡೀ ಮನುಕುಲದ ನಾಶಕ್ಕಿವೆ ಬಾಂಬುಗಳು,
ಆದರೂ, ಮನುಷ್ಯನ ರಕ್ಷಣೆಗಿಲ್ಲ ದಾರಿಗಳು…….

ಮಂಗಳ ಗ್ರಹ ಹತ್ತಿರವಾಗುತ್ತಿದೆ,
ಆದರೆ, ನಮ್ಮ ಬಡ ಹಳ್ಳಿಗಳು ದೂರವಾಗುತ್ತಿವೆ……..

ರಸ್ತೆಗಳು ಸುಂದರವಾಗುತ್ತಿವೆ,
ಆದರೆ, ಅಪಘಾತಗಳು ನಿರಂತರವಾಗುತ್ತಿವೆ……

ಆಸ್ಪತ್ರೆಗಳು ಹ್ಯೆಟೆಕ್ ಗಳು, ಮಲ್ಟಿಸ್ಪೆಷಾಲಿಟಿಗಳು ಆಗುತ್ತಿವೆ.
ಆದರೆ, ಆರೋಗ್ಯ ಹದಗೆಡುತ್ತಿದೆ,
ಸಾವು ಏರುತ್ತಿದೆ…….

ಬೆಳೆಯುತ್ತಿವೆ ಶಿಕ್ಷಣ ಸಂಸ್ಥೆಗಳು,
ಆದರೆ, ಕೊಳೆಯುತ್ತಿವೆ ನಮ್ಮ ಮನಸ್ಸುಗಳು…….

ಎಲ್ಲರನ್ನೂ ಬೆಸೆಯುತ್ತಿವೆ ಸಾಮಾಜಿಕ ಜಾಲತಾಣಗಳು,
ಆದರೆ ಕೊರಗುತ್ತಿವೆ ಮನಸ್ಸುಗಳು ಅನಾಥ ಪ್ರಜ್ಞೆಯಲ್ಲಿ……

ಪ್ರೀತಿಗಾಗಿ ಹಾತೊರೆಯುವ ಮನಸ್ಸುಗಳ ನಡುವೆ ವಿರಹಿಗಳ ಸಂಖ್ಯೆ ಏರುತ್ತಲೇ ಇದೆ…….

ಇದೇ ಅಭಿವೃದ್ಧಿ, ಇದೇ ನಾಗರಿಕತೆ……..

ಮತ್ತೊಮ್ಮೆ ನಮ್ಮನ್ನು ನಾವು ಪುನರ್ರೂಪಿಸಿಕೊಳ್ಳಬೇಕಿದೆ……

ಆ ನಿಟ್ಟಿನಲ್ಲಿ ನಾವೆಲ್ಲ ಯೋಚಿಸೋಣ……

ಏಕೆಂದರೆ ಇದು ನಮ್ಮದೇ ಸಮಾಜ, ನಮ್ಮ ರಕ್ಷಣೆಗಾಗಿ ಬೇರೆ ಯಾರೂ ಇಲ್ಲ, ಆ ದೇವರು ಸಹ……..

ಓಂ, ದೇವರೇ…….

ತಿನ್ನುವ ಅನ್ನ ನಿನ್ನದಂತೆ….

ಕುಡಿಯುವ ನೀರು ನಿನ್ನದಂತೆ….

ಉಸಿರಾಡುವ ಗಾಳಿ ನಿನ್ನದಂತೆ….

ಕಾಣುತ್ತಿರುವ ಬೆಳಕು ನಿನ್ನದಂತೆ…..

ನಿಂತಿರುವ ನೆಲ ನಿನ್ನದಂತೆ…

ತೊಡುವ ಬಟ್ಟೆ ನಿನ್ನದಂತೆ….

ವಾಸಿಸುತ್ತಿರುವ ಮನೆ ನಿನ್ನದಂತೆ…..

ಹುಟ್ಟಿಸಿದ ಅಪ್ಪ ಅಮ್ಮ ನಿನ್ನವರಂತೆ…..

ಅವರನ್ನುಟ್ಟಿಸಿದ ಅಜ್ಜ ಅಜ್ಜಿ ನಿನ್ನವರಂತೆ…..

ನನ್ನ ಹೆಂಡತಿ ಮಕ್ಕಳೂ ನಿನ್ನವರಂತೆ……

ಕೊನೆಗೆ ನಾನೂ ನಿನ್ನವನಂತೆ,…..

ಹಾಗಾದರೆ ನಾನ್ಯಾರು ?….

ನೀನಾಡಿಸುವ ಗೊಂಬೆಯೆ ?…

ಸರಿ ಒಪ್ಪಿಕೊಳ್ಳೋಣ,….

ಇಷ್ಟೆಲ್ಲಾ ಕೊಟ್ಟ ನಿನಗೆ ಕೃತಜ್ಞತೆ ಸಲ್ಲಿಸಬೇಕಿದೆ…..

ಎಲ್ಲಿರುವೆ ನೀನು ಅದನ್ನಾದರೂ ಹೇಳು…..

ನಿನ್ನಲ್ಲೇ ಇರುವೆ, ಅಲ್ಲಿರುವೆ,
ಇಲ್ಲಿರುವೆ, ಎಲ್ಲೆಲ್ಲೂ ಇರುವೆ,
ಈ ಕಥೆ ಎಲ್ಲಾ ಬೇಡ.
ನಿಜ ಹೇಳು ಎಲ್ಲಿರುವೆ ?…..

ಯಾರೋ ಮಹಾತ್ಮರು ಹೇಳಿದರು,….

ಯಾವುದೋ ಗ್ರಂಥ ಹೇಳಿದೆ,…..

ಅದೊಂದು ಅನುಭವ,….

ಸರಿಯಾದ ಮಾರ್ಗದಲ್ಲಿ ಹುಡುಕಿದರೆ ಸಿಗುವನು ಎಂದು ಯಾರೋ
ನನ್ನಂತ ನರಮಾನವರು ಹೇಳುವ ಪುರಾಣ ಬೇಡ……

ನಿಜ ಹೇಳು ಎಲ್ಲಿರುವೆ ?….

ಇಲ್ಲದಿರುವ ನಿನ್ನನ್ನು ಒಪ್ಪಲು ನಾನೇನು ಮೂರ್ಖನೆ,…….

ನನಗೇನು ಗೊತ್ತಿಲ್ಲವೇ, ಸೃಷ್ಟಿಯ ಜೀವರಾಶಿಯಲ್ಲಿ ನಾನೊಂದು ಅಣು,…..

ನಾನು ಬದುಕಿರುವುದೇ ನನಗೆ ಪ್ರಕೃತಿ ನೀಡಿದ ಸಾಮರ್ಥ್ಯದಿಂದ…..

ಯಾವ ಕ್ಷಣದಲ್ಲಾದರು ಅಳಿದು ಹೋಗುವ ಪ್ರಾಣವಿದು,…..

ನನಗಾದರೂ ಜೀವವಿದೆ, ನಿನಗೇನಿದೆ ?…..

ಬರಿಯ ಪೋಟೋ, ಶಿಲೆ, ಮಂತ್ರ, ಯಂತ್ರ, ತಂತ್ರ,…..

ಆದರೂ ಏಕೆ ನೀನು ನನ್ನನ್ನು ಕಾಡುವೆ
ಪ್ರತಿಕ್ಷಣ ಭೂತದಂತೆ,…..

ಮನವೆಂಬ ಮರ್ಕಟಕೆ ಹೆಂಡ ಕುಡಿಸಿ
ಚೇಳು ಕುಟುಕಿಸಿದಂತಾಗಿದೆ ನನ್ನ ಮನಸ್ಸು…..,

ಇದ್ದರೆ ಮರ್ಯಾದೆಯಿಂದ ಬಾ,
ಇಲ್ಲದಿದ್ದರೆ ತೊಲಗಾಚೆ,…..

ತಲೆ ತಿನ್ನಬೇಡ
ಜನರೆಲ್ಲಾ ಗೊಂದಲದಲ್ಲಿದ್ದಾರೆ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

60 minutes ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

5 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

5 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

8 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

23 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago