Categories: ಲೇಖನ

ದೇವರು ಮತ್ತು ಗಲಭೆಗಳು…..ಇದೊಂದು ವಿಚಿತ್ರ…

ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ನಡೆಯುವ ಗಲಭೆಗಳಿಗೆ ಕಾರಣವೇನಿರಬಹುದು ಮತ್ತು ಯಾರ ನಡುವೆ ಈ ಗಲಭೆಗಳು ನಡೆಯುತ್ತವೆ…..

ಇದೊಂದು ವಿಚಿತ್ರ ಮತ್ತು ಮಿಲಿಯನ್ ಡಾಲರ್ ಪ್ರಶ್ನೆ……

ಇದು,
ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯೇ,
ಅಥವಾ
ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಘರ್ಷಣೆಯೇ, ಅಥವಾ
ಗಣೇಶ ಮತ್ತು ಅಲ್ಲಾಹು ನಡುವಿನ ಘರ್ಷಣೆಯೇ, ಅಥವಾ
ಪೊಲೀಸರು ಮತ್ತು ಸಾಮಾನ್ಯ ಜನರ ನಡುವಿನ ಘರ್ಷಣೆಯೇ,
ಅಥವಾ
ಧರ್ಮ ಮತ್ತು ಸಂವಿಧಾನದ ನಡುವಿನ ಘರ್ಷಣೆಯೇ,
ಅಥವಾ
ನಾಗರಿಕರು ಮತ್ತು ಅನಾಗರಿಕರ ನಡುವಿನ ಘರ್ಷಣೆಯೇ,
ಅಥವಾ
ಶಾಂತಿ ಪ್ರಿಯರು ಮತ್ತು ಗಲಭೆ ಕೋರರ ನಡುವಿನ ಘರ್ಷಣೆಯೇ,
ಅಥವಾ
ಕಿಡಿಗೇಡಿಗಳು, ಸುಪಾರಿ ಕಿಲ್ಲರ್ ಗಳು ಹಾಗು ರಾಜಕೀಯ ದಲ್ಲಾಳಿಗಳ ಸಂಚೇ….. ??
ಇದರಲ್ಲಿ ಯಾವುದಿರಬಹುದು !!!!

ನಿನ್ನೆ ಮೊನ್ನೆ ನಡೆದ ನಾಗಮಂಗಲದ ಗಲಭೆ ಮಾತ್ರವಲ್ಲ, ಅನೇಕ ವರ್ಷಗಳಿಂದ ರಾಜ್ಯ ಮತ್ತು ದೇಶದ ವಿವಿಧ ಭಾಗಗಳಲ್ಲಿ ಆಗಾಗ ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಕೇವಲ ಗಣೇಶೋತ್ಸವ ಮಾತ್ರವಲ್ಲ ಬೇರೆ ಉತ್ಸವಗಳ ಅಥವಾ ಉರಸ್ ಗಳ ಸಂದರ್ಭದಲ್ಲಿ ಸಹ ಈ ರೀತಿಯ ಕ್ಷೋಭೆಗಳು ನಡೆಯುತ್ತಲೇ ಇರುತ್ತವೆ…

ದೇವನೊಬ್ಬ ನಾಮ ಹಲವು,
ದೇವರು ಸರ್ವಾಂತರ್ಯಾಮಿ, ದೇವರು ಇಡೀ ಜಗತ್ತಿನ ಒಬ್ಬನೇ ಸೃಷ್ಟಿಕರ್ತ ಎಂದು ಹೇಳುವ ಇದೇ ಧಾರ್ಮಿಕ ನಂಬುಗೆಯ ಸಮಾಜದಲ್ಲಿ ದೇವರ ಉತ್ಸವಗಳಲ್ಲಿಯೇ ಈ ರೀತಿ ಗಲಭೆಗಳು ನಡೆಯುವುದಾದರೆ ದೇವರ ಅಸ್ತಿತ್ವವನ್ನು, ಜನರ ಭಕ್ತಿ ಮತ್ತು ನಂಬಿಕೆಯನ್ನು ಮತ್ತೆ ಮತ್ತೆ ಪ್ರಶ್ನಿಸಬೇಕಾಗುತ್ತದೆ. ನಿಜಕ್ಕೂ ದೇವನೊಬ್ಬನೇ ಆದರೆ ಎಲ್ಲಾ ದೇವಮಂದಿರಗಳು ಒಂದೇ ಅಲ್ಲವೇ.. ?

ಹಾಗಿದ್ದಲ್ಲಿ ಮಸೀದಿಗಳಿಗೆ ಹಿಂದೂ ಮುಸ್ಲಿಮರು ಕ್ರಿಶ್ಚಿಯನ್ನರು ಕೈಮುಗಿಯಬಹುದು, ಹಾಗೆಯೇ ದೇವಸ್ಥಾನಗಳಿಗೆ ಈ ಎಲ್ಲರೂ ಪ್ರಾರ್ಥನೆ ಸಲ್ಲಿಸಬಹುದು, ಚರ್ಚ್ಗಳಿಗೂ ಇದೇ ರೀತಿಯ ಗೌರವ ಭಕ್ತಿ ತೋರಬಹುದಲ್ಲವೇ ? ಹಾಗೆ ಮಾಡದೆ ಮಸೀದಿಯನ್ನು ದ್ವೇಷಿಸುವ ಒಂದು ಜನಾಂಗ, ದೇವಸ್ಥಾನಗಳನ್ನು ದ್ವೇಷಿಸುವ ಇನ್ನೊಂದು ಜನಾಂಗ, ಚರ್ಚ್ ಗಳನ್ನು ದ್ವೇಷಿಸುವ ಮತ್ತೊಂದು ಜನಾಂಗ ಇದೆಲ್ಲವೂ ಏನನ್ನು ತೋರಿಸುತ್ತದೆ. ಅಲ್ಲಾ ಬೇರೆ, ಗಣೇಶ ಬೇರೆ, ಯೇಸು ಬೇರೆ ಎಂದಾದರೆ ಇದು ಮೂರ್ಖರ ಸಾಮ್ರಾಜ್ಯವಲ್ಲವೇ ?….

ಇವರಿಗೆ ನಿಜವಾಗಲೂ ದೇವರ ಮೇಲೆ ನಂಬಿಕೆ ಇಲ್ಲ, ಕೇವಲ ತಮ್ಮ ಸ್ವಾರ್ಥಕ್ಕಾಗಿ, ಕಪಟ ನಾಟಕ ಅಥವಾ ಮುಖವಾಡದ ಮರೆಯಲ್ಲಿ ಬದುಕುತ್ತಿದ್ದಾರೆ. ದೇವರು ಇವರನ್ನು ಸೃಷ್ಟಿಸಿಲ್ಲ, ಇವರೇ ದೇವರನ್ನು ಸೃಷ್ಟಿಸಿ ಅದನ್ನು ಇವರೇ ಶ್ರೇಷ್ಠವೆಂದು, ಅತಿ ಮಾನುಷ ಶಕ್ತಿ ಎಂದು ಆರೋಪಿಸಿ, ಅದರ ಉಳಿವಿಗಾಗಿ ತಮ್ಮ ತಮ್ಮಲ್ಲೇ ಹೊಡೆದಾಡುವ ಸ್ವಾರ್ಥಿಗಳು, ವಂಚಕರು, ಮೋಸಗಾರರು ಎಂದು ಕರೆಯಬಹುದಲ್ಲವೇ…..?

ದೇವರ ಪೂಜೆ, ಉತ್ಸವ, ಮೆರವಣಿಗೆಗಳನ್ನು ಸರಿಯಾಗಿ ಮಾಡಲು ಬರುವುದಿಲ್ಲ, ಸರ್ಕಾರಿ ಕಚೇರಿಗಳನ್ನು ಭ್ರಷ್ಟಾಚಾರ ಮುಕ್ತ ಮಾಡಲು ಸಾಧ್ಯವಾಗುವುದಿಲ್ಲ, ಸಮಾಜವನ್ನು ಜಾತಿ, ಧರ್ಮ ರಹಿತವಾಗಿ, ಕೇವಲ ಮನುಷ್ಯ ಧರ್ಮವಾಗಿ ಮಾಡಲು ಸಾಧ್ಯವಾಗುವುದಿಲ್ಲ, ಮಹಿಳೆಯರನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ,
ಕೊಲೆ, ಅತ್ಯಾಚಾರ, ದರೋಡೆ, ಕಳ್ಳತನವನ್ನು ತಡೆಯಲು ಸಾಧ್ಯವಾಗುತ್ತಿಲ್ಲ,
ಶುದ್ಧ ಗಾಳಿ, ನೀರು, ಆಹಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಯಾವುದೇ ವ್ಯಾಪಾರ ವ್ಯವಹಾರಗಳನ್ನು ಪ್ರಾಮಾಣಿಕವಾಗಿ ಮಾಡಲು ಸಾಧ್ಯವಾಗುತ್ತಿಲ್ಲ…..

ಆದರೆ ಬಹುತೇಕ ಎಲ್ಲರೂ ಮಹಾನ್ ದೈವಭಕ್ತರು, ಧರ್ಮದ ಆರಾಧಕರು.

ಒಂದು ನಾಗರಿಕ ಸಮಾಜ ನೆಮ್ಮದಿಯಿಂದ, ಸುರಕ್ಷತೆಯಿಂದ, ಸ್ವಾತಂತ್ರ್ಯದಿಂದ, ಸಮಾನತೆಯಿಂದ, ಮಾನವೀಯತೆಯಿಂದ ಇರಲು ಸಾಧ್ಯವಾಗದಿದ್ದರೆ ಅದು ಹುಚ್ಚರ ಸಂತೆಯಂತೆ,
ಕಳ್ಳರ ಸಂತೆಯಂತೆ,
ಕಪಟಿಗಳ ಮುಖವಾಡದಂತೆ, ಹೀಗೆ ನಡೆಯುತ್ತಲೇ ಇರುತ್ತದೆ…..

ದೇವರು ಮತ್ತು ಧರ್ಮದ ಪರಿಕಲ್ಪನೆ ಸೃಷ್ಟಿಯಾಗಿರುವುದು ಈ ಸಮಾಜ ಕ್ರಮಬದ್ಧವಾಗಿ ಶಾಂತಿಯುತವಾಗಿ ಮುಂದುವರಿಯಲು. ಅದು ವಿಫಲವಾದ ಅಥವಾ ಸಂಪೂರ್ಣವಾಗಿ ಯಶಸ್ವಿಯಾಗದ ಕಾರಣದಿಂದಲೇ ಸಂವಿಧಾನ ಅಸ್ತಿತ್ವಕ್ಕೆ ಬಂದಿದೆ. ಕಾನೂನು ಕಟ್ಟಳೆಗಳು ಜಾರಿಯಾಗಿದೆ…

ಈಗ ಅದನ್ನಾದರೂ ಸರಿಯಾಗಿ ಗೌರವದಿಂದ ಪಾಲಿಸುವ ಮೂಲಕ ನಾವೆಲ್ಲರೂ ಒಂದಷ್ಟು ನೆಮ್ಮದಿಯಿಂದ ಬದುಕೋಣ. ಇಲ್ಲದಿದ್ದರೆ ನಾಗಮಂಗಲದಂತ ಘಟನೆಗಳು ಮತ್ತೆ ಮತ್ತೆ ಪುನರಾವರ್ತನೆಯಾದರೆ, ಇದನ್ನು ನಾಗರಿಕ ಸಮಾಜ ಎನ್ನಲು ಸಾಧ್ಯವಾಗುವುದಿಲ್ಲ. ಇದೊಂದು ಮಾನಸಿಕ ರೋಗಿಗಳ ಅಸ್ವಸ್ಥ ಸಮಾಜ ಎನ್ನುವುದೇ ಹೆಚ್ಚು ಸೂಕ್ತವಾಗುತ್ತದೆ….

ದಯವಿಟ್ಟು ಎಲ್ಲಾ ಸಾರ್ವಜನಿಕರು ದೇವರು ಧರ್ಮಗಳ ಬಗ್ಗೆ, ಅತಿರೇಕದ ಉತ್ಸವಗಳ ಬಗ್ಗೆ ಮತ್ತೊಮ್ಮೆ ಯೋಚಿಸಿ. ಮನುಷ್ಯ ಮನುಷ್ಯನನ್ನು ಪ್ರೀತಿಸದೆ ಇಲ್ಲದಿರುವ ಇನ್ಯಾರನ್ನೋ ಪೂಜಿಸಿದರೆ ಈ ರೀತಿಯ ಸಮಸ್ಯೆಗಳೇ ಸೃಷ್ಟಿಯಾಗುವುದು. ಆಳವಾಗಿ ಧೈರ್ಯದಿಂದ ಯೋಚಿಸಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago