ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…