ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…