ದೇವರ ಕಾರ್ಯಕ್ರಮಗಳು ಕಾಲಕಾಲಕ್ಕೆ ನಡೆಯುತ್ತಲೇ ಇರಬೇಕು- ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಜೆಡಿಎಸ್ ಮುಖಂಡ ಪ್ರವೀಣ್ ಮಾತನಾಡಿ, ಹೆಚ್ಚು ಬಡವರು, ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ನೇಕಾರರು ವಾಸಿಸುತ್ತಿರುವ ಈ ಭಾಗದಲ್ಲಿ ಮೂಲಭೂತ ಸಮಸ್ಯೆಗಳಾದ ರಸ್ತೆ, ಚರಂಡಿ ದುರಸ್ತಿ, ಶುದ್ಧ ಕುಡಿಯುವ ನೀರು, ಬೀದಿ ದೀಪಗಳು ಸೇರಿದಂತೆ ನಗರಸಭೆಯಿಂದ ದೊರೆಯುವ ಎಲ್ಲಾ ಸೌಲಭ್ಯಗಳು ಈ ಭಾಗಕ್ಕೆ ಹೆಚ್ಚು ದೊರಕಲಿ ಹಾಗೂ ಈ ಭಾಗದಲ್ಲಿ ಕಾರ್ಮಿಕ ವರ್ಗದವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಸ್ಸಿನ ಸೌಕರ್ಯ ಆಗಬೇಕು ಎಂದು ಒತ್ತಾಯಿಸಿದರು…

ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

8 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago