ದೇವರ ಕಾರ್ಯಕ್ರಮಗಳು ಕಾಲಕಾಲಕ್ಕೆ ನಡೆಯುತ್ತಲೇ ಇರಬೇಕು- ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಜೆಡಿಎಸ್ ಮುಖಂಡ ಪ್ರವೀಣ್ ಮಾತನಾಡಿ, ಹೆಚ್ಚು ಬಡವರು, ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ನೇಕಾರರು ವಾಸಿಸುತ್ತಿರುವ ಈ ಭಾಗದಲ್ಲಿ ಮೂಲಭೂತ ಸಮಸ್ಯೆಗಳಾದ ರಸ್ತೆ, ಚರಂಡಿ ದುರಸ್ತಿ, ಶುದ್ಧ ಕುಡಿಯುವ ನೀರು, ಬೀದಿ ದೀಪಗಳು ಸೇರಿದಂತೆ ನಗರಸಭೆಯಿಂದ ದೊರೆಯುವ ಎಲ್ಲಾ ಸೌಲಭ್ಯಗಳು ಈ ಭಾಗಕ್ಕೆ ಹೆಚ್ಚು ದೊರಕಲಿ ಹಾಗೂ ಈ ಭಾಗದಲ್ಲಿ ಕಾರ್ಮಿಕ ವರ್ಗದವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಸ್ಸಿನ ಸೌಕರ್ಯ ಆಗಬೇಕು ಎಂದು ಒತ್ತಾಯಿಸಿದರು…

ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

40 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago