ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…