ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…