ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಕಳ್ಳತನಕ್ಕೆ ಬಳಸಿದ ಬೈಕ್ ಮತ್ತು ಕಳವು ಮಾಡಿದ್ದ ₹1.10 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ಹನೀಫಾಬಾದ್ನ ನೆರ್ಲೆಸರ ನಿವಾಸಿ ಸೈಯದ್ ಯೂನುಸ್ ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲನ್ನು ಮುರಿದು ಒಳನುಗ್ಗಿದ ಆರೋಪಿ, ದೇವಸ್ಥಾನದಲ್ಲಿದ್ದ ತಾಮ್ರದ ಕೊಡ, ಹರಿವಾಣ ಸೇರಿದಂತೆ ಪೂಜಾ ಪರಿಕರಗಳನ್ನು ಕದ್ದೊಯ್ದು ಪರಾರಿಯಾಗಿದ್ದ.
ಈ ದೇವಸ್ಥಾನವು ತೆಂಗಿನಗುಂಡಿ ನಿವಾಸಿ ಮಾದೇವ ಅಚ್ಯುತ್ ಪ್ರಭು ಅವರ ಕುಟುಂಬಕ್ಕೆ ಸೇರಿದ್ದಾಗಿದ್ದು, ಭಾನುವಾರ ಬೆಳಿಗ್ಗೆ ಕುಟುಂಬದ ಮಹಿಳೆಯೊಬ್ಬರು ಪೂಜೆಗೆ ಬಂದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.
ಕೂಡಲೇ ಅವರು ಕುಟುಂಬದವರಿಗೆ ಮತ್ತು ಊರ ಜನರಿಗೆ ಮಾಹಿತಿ ನೀಡಿದ್ದಾರೆ. ಜನ ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದನು.
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಆರೋಪಿ ನ್ಯಾಯಾಂಗ ಬಂಧನಕ್ಕೆ
ಕಳ್ಳತನದ ಮಾಹಿತಿ ತಿಳಿದ ಕೂಡಲೇ ಭಟ್ಕಳ ಗ್ರಾಮೀಣ ಪೊಲೀಸರು ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರ ಮಾರ್ಗದರ್ಶನ ಮತ್ತು ಪಿಎಸ್ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನ ಕಳೆಯುವುದರೊಳಗೆ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…