ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ ಕಳ್ಳತನಕ್ಕೆ ಬಳಸಿದ ಬೈಕ್ ಮತ್ತು ಕಳವು ಮಾಡಿದ್ದ ₹1.10 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ಹನೀಫಾಬಾದ್‌ನ ನೆರ್ಲೆಸರ ನಿವಾಸಿ ಸೈಯದ್ ಯೂನುಸ್ ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲನ್ನು ಮುರಿದು ಒಳನುಗ್ಗಿದ ಆರೋಪಿ, ದೇವಸ್ಥಾನದಲ್ಲಿದ್ದ ತಾಮ್ರದ ಕೊಡ, ಹರಿವಾಣ ಸೇರಿದಂತೆ ಪೂಜಾ ಪರಿಕರಗಳನ್ನು ಕದ್ದೊಯ್ದು ಪರಾರಿಯಾಗಿದ್ದ.

ಈ ದೇವಸ್ಥಾನವು ತೆಂಗಿನಗುಂಡಿ ನಿವಾಸಿ ಮಾದೇವ ಅಚ್ಯುತ್ ಪ್ರಭು ಅವರ ಕುಟುಂಬಕ್ಕೆ ಸೇರಿದ್ದಾಗಿದ್ದು, ಭಾನುವಾರ ಬೆಳಿಗ್ಗೆ ಕುಟುಂಬದ ಮಹಿಳೆಯೊಬ್ಬರು ಪೂಜೆಗೆ ಬಂದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಕೂಡಲೇ ಅವರು ಕುಟುಂಬದವರಿಗೆ ಮತ್ತು ಊರ ಜನರಿಗೆ ಮಾಹಿತಿ ನೀಡಿದ್ದಾರೆ. ಜನ ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದನು.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಆರೋಪಿ ನ್ಯಾಯಾಂಗ ಬಂಧನಕ್ಕೆ

ಕಳ್ಳತನದ ಮಾಹಿತಿ ತಿಳಿದ ಕೂಡಲೇ ಭಟ್ಕಳ ಗ್ರಾಮೀಣ ಪೊಲೀಸರು ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರ ಮಾರ್ಗದರ್ಶನ ಮತ್ತು ‌ಪಿಎಸ್‌ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನ ಕಳೆಯುವುದರೊಳಗೆ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

7 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

10 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

12 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

12 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

19 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

20 hours ago