ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಕಳ್ಳತನಕ್ಕೆ ಬಳಸಿದ ಬೈಕ್ ಮತ್ತು ಕಳವು ಮಾಡಿದ್ದ ₹1.10 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ಹನೀಫಾಬಾದ್ನ ನೆರ್ಲೆಸರ ನಿವಾಸಿ ಸೈಯದ್ ಯೂನುಸ್ ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲನ್ನು ಮುರಿದು ಒಳನುಗ್ಗಿದ ಆರೋಪಿ, ದೇವಸ್ಥಾನದಲ್ಲಿದ್ದ ತಾಮ್ರದ ಕೊಡ, ಹರಿವಾಣ ಸೇರಿದಂತೆ ಪೂಜಾ ಪರಿಕರಗಳನ್ನು ಕದ್ದೊಯ್ದು ಪರಾರಿಯಾಗಿದ್ದ.
ಈ ದೇವಸ್ಥಾನವು ತೆಂಗಿನಗುಂಡಿ ನಿವಾಸಿ ಮಾದೇವ ಅಚ್ಯುತ್ ಪ್ರಭು ಅವರ ಕುಟುಂಬಕ್ಕೆ ಸೇರಿದ್ದಾಗಿದ್ದು, ಭಾನುವಾರ ಬೆಳಿಗ್ಗೆ ಕುಟುಂಬದ ಮಹಿಳೆಯೊಬ್ಬರು ಪೂಜೆಗೆ ಬಂದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.
ಕೂಡಲೇ ಅವರು ಕುಟುಂಬದವರಿಗೆ ಮತ್ತು ಊರ ಜನರಿಗೆ ಮಾಹಿತಿ ನೀಡಿದ್ದಾರೆ. ಜನ ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದನು.
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಆರೋಪಿ ನ್ಯಾಯಾಂಗ ಬಂಧನಕ್ಕೆ
ಕಳ್ಳತನದ ಮಾಹಿತಿ ತಿಳಿದ ಕೂಡಲೇ ಭಟ್ಕಳ ಗ್ರಾಮೀಣ ಪೊಲೀಸರು ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರ ಮಾರ್ಗದರ್ಶನ ಮತ್ತು ಪಿಎಸ್ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನ ಕಳೆಯುವುದರೊಳಗೆ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…