Categories: ತುಮಕೂರು

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿ ಬಂಧನ

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್‌ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.

ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ramesh Babu

Journalist

Recent Posts

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

6 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

15 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

17 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

21 hours ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…

1 day ago