ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.
ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…