Categories: ತುಮಕೂರು

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿ ಬಂಧನ

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್‌ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.

ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

4 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

4 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

6 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago