Categories: ತುಮಕೂರು

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿ ಬಂಧನ

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್‌ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.

ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

5 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

18 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

19 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago