ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.
ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…