ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.
ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…