ದೇವಸ್ಥಾನದ ಹುಂಡಿ ಕಾಣಿಕೆಗೂ ಡಿಜಿಟಲ್ ವ್ಯವಸ್ಥೆ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇ-ಹುಂಡಿ ವ್ಯವಸ್ಥೆ ಆರಂಭ

ದೇವಸ್ಥಾನದ ಹುಂಡಿ ಕಾಣಿಕೆಗೂ ಡಿಜಿಟಲ್ ವ್ಯವಸ್ಥೆ ಲಗ್ಗೆ ಇಟ್ಟಿದ್ದು, ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇ-ಹುಂಡಿ ವ್ಯವಸ್ಥೆಯನ್ನ ಆರಂಭಿಸಲಾಗಿದೆ.

ಮುಜರಾಯಿ ಇಲಾಖೆ, ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಸಹಯೋಗದಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಗೂಗಲ್ ಪೇ, ಫೋನ್ ಪೇ, ಬೀಮ್, ಪೇಟಿಎಂ ಸೇರಿದಂತೆ ಯಾವುದೇ UPI ಆ್ಯಪ್‌ನಿಂದ ಭಕ್ತರು ಕಾಣಿಕೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕ್ಯೂಆರ್ ಕೋಡ್ ಅಳವಡಿಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿ ಕಾಣಿಕೆ ಅರ್ಪಿಸಲು ಅವಕಾಶ ನೀಡಲಾಗಿದೆ. ಮುಜರಾಯಿ ಇಲಾಖೆ ಅಧೀನದ ರಾಜ್ಯದ ಎಲ್ಲ ಎ ಗ್ರೇಡ್ ದೇವಾಲಯಗಳಲ್ಲೂ ಇ- ಹುಂಡಿ ಜಾರಿ ಮಾಡಲಾಗುತ್ತಿದೆ.

ಈ ಕುರಿತು ದೇವಸ್ಥಾನದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಭಕ್ತಾಧಿಗಳ ಅನುಕೂಲಕ್ಕಾಗಿ ಇ-ಹುಂಡಿ ಅಳವಡಿಸಲಾಗಿದೆ. ಇ-ಹುಂಡಿಗೆ ಸಂಪೂರ್ಣ ಭದ್ರತೆ ವಹಿಸಲಾಗಿದೆ. ಭಕ್ತರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಸೌಲಭ್ಯದಿಂದ ದೇಗುಲಕ್ಕೆ ಮತ್ತಷ್ಟು ದೇಣಿಗೆ ಹರಿದು ಬರುವ ಸಾಧ್ಯತೆ ಇದೆ ಎಂದರು.

ಭಕ್ತರು ತಮ್ಮ ಹರಕೆಯ ಹಣವನ್ನು ದೇವರ ಹುಂಡಿ ಬದಲು ಜೇಬಿನಲ್ಲಿ ಹಣ ಇಲ್ಲದಿದ್ದರೂ ಸುಲಭವಾಗಿ ತಮ್ಮ ಮೊಬೈಲ್ ಮೂಲಕ ದೇವಾಲಯದ ಖಾತೆಗೆ ವರ್ಗಾಯಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿದಂತಾಗುತ್ತದೆ ಎಂದು ಹೇಳಿದರು.

ಈ ವೇಳೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕ ಉಮೇಶ್‌ ಕುಮಾರ್ ಸಿಂಗ್, ಅರ್ಜಿತ್ ದಾಸ್ ಹಾಗೂ ದೇವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago