ದೇವಸ್ಥಾನದ ಹುಂಡಿ ಕಾಣಿಕೆಗೂ ಡಿಜಿಟಲ್ ವ್ಯವಸ್ಥೆ ಲಗ್ಗೆ ಇಟ್ಟಿದ್ದು, ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇ-ಹುಂಡಿ ವ್ಯವಸ್ಥೆಯನ್ನ ಆರಂಭಿಸಲಾಗಿದೆ.
ಮುಜರಾಯಿ ಇಲಾಖೆ, ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಸಹಯೋಗದಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಗೂಗಲ್ ಪೇ, ಫೋನ್ ಪೇ, ಬೀಮ್, ಪೇಟಿಎಂ ಸೇರಿದಂತೆ ಯಾವುದೇ UPI ಆ್ಯಪ್ನಿಂದ ಭಕ್ತರು ಕಾಣಿಕೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕ್ಯೂಆರ್ ಕೋಡ್ ಅಳವಡಿಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿ ಕಾಣಿಕೆ ಅರ್ಪಿಸಲು ಅವಕಾಶ ನೀಡಲಾಗಿದೆ. ಮುಜರಾಯಿ ಇಲಾಖೆ ಅಧೀನದ ರಾಜ್ಯದ ಎಲ್ಲ ಎ ಗ್ರೇಡ್ ದೇವಾಲಯಗಳಲ್ಲೂ ಇ- ಹುಂಡಿ ಜಾರಿ ಮಾಡಲಾಗುತ್ತಿದೆ.
ಈ ಕುರಿತು ದೇವಸ್ಥಾನದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಭಕ್ತಾಧಿಗಳ ಅನುಕೂಲಕ್ಕಾಗಿ ಇ-ಹುಂಡಿ ಅಳವಡಿಸಲಾಗಿದೆ. ಇ-ಹುಂಡಿಗೆ ಸಂಪೂರ್ಣ ಭದ್ರತೆ ವಹಿಸಲಾಗಿದೆ. ಭಕ್ತರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಸೌಲಭ್ಯದಿಂದ ದೇಗುಲಕ್ಕೆ ಮತ್ತಷ್ಟು ದೇಣಿಗೆ ಹರಿದು ಬರುವ ಸಾಧ್ಯತೆ ಇದೆ ಎಂದರು.
ಭಕ್ತರು ತಮ್ಮ ಹರಕೆಯ ಹಣವನ್ನು ದೇವರ ಹುಂಡಿ ಬದಲು ಜೇಬಿನಲ್ಲಿ ಹಣ ಇಲ್ಲದಿದ್ದರೂ ಸುಲಭವಾಗಿ ತಮ್ಮ ಮೊಬೈಲ್ ಮೂಲಕ ದೇವಾಲಯದ ಖಾತೆಗೆ ವರ್ಗಾಯಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿದಂತಾಗುತ್ತದೆ ಎಂದು ಹೇಳಿದರು.
ಈ ವೇಳೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕ ಉಮೇಶ್ ಕುಮಾರ್ ಸಿಂಗ್, ಅರ್ಜಿತ್ ದಾಸ್ ಹಾಗೂ ದೇವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…