ದೇವಸ್ಥಾನದ ಹುಂಡಿ ಕಾಣಿಕೆಗೂ ಡಿಜಿಟಲ್ ವ್ಯವಸ್ಥೆ ಲಗ್ಗೆ ಇಟ್ಟಿದ್ದು, ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇ-ಹುಂಡಿ ವ್ಯವಸ್ಥೆಯನ್ನ ಆರಂಭಿಸಲಾಗಿದೆ.
ಮುಜರಾಯಿ ಇಲಾಖೆ, ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಸಹಯೋಗದಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಗೂಗಲ್ ಪೇ, ಫೋನ್ ಪೇ, ಬೀಮ್, ಪೇಟಿಎಂ ಸೇರಿದಂತೆ ಯಾವುದೇ UPI ಆ್ಯಪ್ನಿಂದ ಭಕ್ತರು ಕಾಣಿಕೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕ್ಯೂಆರ್ ಕೋಡ್ ಅಳವಡಿಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿ ಕಾಣಿಕೆ ಅರ್ಪಿಸಲು ಅವಕಾಶ ನೀಡಲಾಗಿದೆ. ಮುಜರಾಯಿ ಇಲಾಖೆ ಅಧೀನದ ರಾಜ್ಯದ ಎಲ್ಲ ಎ ಗ್ರೇಡ್ ದೇವಾಲಯಗಳಲ್ಲೂ ಇ- ಹುಂಡಿ ಜಾರಿ ಮಾಡಲಾಗುತ್ತಿದೆ.
ಈ ಕುರಿತು ದೇವಸ್ಥಾನದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಭಕ್ತಾಧಿಗಳ ಅನುಕೂಲಕ್ಕಾಗಿ ಇ-ಹುಂಡಿ ಅಳವಡಿಸಲಾಗಿದೆ. ಇ-ಹುಂಡಿಗೆ ಸಂಪೂರ್ಣ ಭದ್ರತೆ ವಹಿಸಲಾಗಿದೆ. ಭಕ್ತರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಸೌಲಭ್ಯದಿಂದ ದೇಗುಲಕ್ಕೆ ಮತ್ತಷ್ಟು ದೇಣಿಗೆ ಹರಿದು ಬರುವ ಸಾಧ್ಯತೆ ಇದೆ ಎಂದರು.
ಭಕ್ತರು ತಮ್ಮ ಹರಕೆಯ ಹಣವನ್ನು ದೇವರ ಹುಂಡಿ ಬದಲು ಜೇಬಿನಲ್ಲಿ ಹಣ ಇಲ್ಲದಿದ್ದರೂ ಸುಲಭವಾಗಿ ತಮ್ಮ ಮೊಬೈಲ್ ಮೂಲಕ ದೇವಾಲಯದ ಖಾತೆಗೆ ವರ್ಗಾಯಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿದಂತಾಗುತ್ತದೆ ಎಂದು ಹೇಳಿದರು.
ಈ ವೇಳೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕ ಉಮೇಶ್ ಕುಮಾರ್ ಸಿಂಗ್, ಅರ್ಜಿತ್ ದಾಸ್ ಹಾಗೂ ದೇವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…